ಕೈಲಾಸ ಯಾತ್ರೆಯ ವೇಳೆ ನದಿಗೆ ಬಿದ್ದ ಕಾರು- ಬೆಂಗಳೂರಿನ ಇಬ್ಬರು ಸೇರಿ 6 ಮಂದಿ ಸಾವು

ಉತ್ತರಾಖಂಡ್: ಕಾರು ನದಿಗೆ ಬಿದ್ದ ಪರಿಣಾಮ ಕರ್ನಾಟಕದ ಇಬ್ಬರು ಸೇರಿದಂತೆ 6 ಮಂದಿ ಮೃತಪಟ್ಟಿರುವ ಘಟನೆ ಉತ್ತರಾಖಂಡದ ಪಿಥೋರಗಢ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಕೈಲಾಸ ದೇವರ ದರ್ಶನ ಮಾಡಿ ವಾಪಾಸ್‌ ಬರುವ ವೇಳೆ ಈ ದುರಂತ ಘಟನೆ ನಡೆದಿದೆ ಎಂದು ಪಿಥೋರಗಢ್ ಪೊಲೀಸ್ ಅಧೀಕ್ಷಕ ಲೋಕೇಶ್ವರ್ ಸಿಂಗ್ ತಿಳಿಸಿದ್ದಾರೆ.

ಮಂಗಳವಾರ ಸಂಜೆ ಧಾರ್ಚುಲಾ-ಲಿಪುಲೇಖ್ ರಸ್ತೆಯಲ್ಲಿ ಬರುತ್ತಿದ್ದ ವೇಳೆ ಕಾರು ಕಾಳಿ ನದಿಗೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ 6 ಮಂದಿ ಸಾವನ್ನಪ್ಪಿದ್ದರೆ.

Advertisement

ಮೃತರಲ್ಲಿ ಇಬ್ಬರು ಬೆಂಗಳೂರಿನವರು, ಇಬ್ಬರು ತೆಲಂಗಾಣದವರು ಹಾಗೂ ಇಬ್ಬರು ಉತ್ತರಾಖಂಡದವರು ಎಂದು ಲೋಕೇಶ್ವರ್ ಸಿಂಗ್ ಹೇಳಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತದೇಹದ ಶೋಧಕಾರ್ಯ ನಡೆಯುತ್ತಿದೆ ಎಂದು ಮಾಹಿತಿ ಬಂದಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement