ಕೊಟ್ಟಿಗೆಹಾರದಲ್ಲಿ 200 ಅಡಿ ಆಳತಕ್ಕೆ ಬಿದ್ದ ಕಾರು – ಚಾಲಕ ಮೃತ್ಯು

ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಬಾಳೂರು ಠಾಣ ವ್ಯಾಪ್ತಿಯ ಅಬ್ರುಕೊಡುಗೆ ಬಳಿ ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಪ್ರಪಾತಕ್ಕೆ ಕಾರೊಂದು ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಅಣಜೂರು ಜಯಮ್ಮನಾಗೇಶರವರ ಪುತ್ರ ರಂಜನ್(38) ಮೃತ ದುರ್ದೈವಿ.ರಂಜನ್ ಅವರು ಜನ್ನಪುರದಲ್ಲಿ ಹೋಟೆಲ್ ನಡೆಸುತ್ತಿದ್ದು, ಜನ್ನಾಪುರದಿಂದ ಕಳಸ ಕಡೆಗೆ ಹೋಗುವಾಗ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಇನ್ನು ಅಬ್ರುಕೊಡುಗೆ ತಿರುವು ಬಳಿ ತಡೆಗೋಡೆ ಇಲ್ಲದೆ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement