‘ಸರ್ಕಾರ ಸ್ಥಿರವಾಗಿದ್ದು, ಮುಖ್ಯಮಂತ್ರಿಗಳ ಬದಲಾವಣೆ ಇಲ್ಲ’ – ದೇಶಪಾಂಡೆ

ಕಾರವಾರ: ಸಿದ್ದರಾಮಯ್ಯ ನಾಯಕತ್ವದಲ್ಲಿ ಸರ್ಕಾರ ಸ್ಥಿರವಾಗಿದ್ದು, ಸಿಎಂ ಬದಲಾವಣೆ ಇಲ್ಲ ಎಂದು ಶಾಸಕ ಆರ್.ವಿ.ದೇಶಪಾಂಡೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಿಎಂ ಬದಲಾವಣೆ ಕುರಿತು ಕೆಲವು ಕಾಂಗ್ರೆಸ್​ ಶಾಸಕರು ನೀಡಿರುವ ಹೇಳಿಕೆಗೆ ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದ್ದು, “ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿರುವುದು ಸಾಮಾನ್ಯ ಸಂಗತಿಯಾಗಿದೆ. ಅದರರ್ಥ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುತ್ತಾರೆ ಎಂದಲ್ಲ. ಪಕ್ಷದಲ್ಲಿರುವ ಸ್ನೇಹಿತರೆಲ್ಲಾ ಜೊತೆ ಸೇರಿ ಚರ್ಚೆ ಮಾಡಬಹುದು, ಇದು ಒಂದು ದೃಷ್ಟಿಯಲ್ಲಿ ಒಳ್ಳೆಯದೇ. ಚರ್ಚೆಗಳಿಂದ ಪಕ್ಷದ ಬೆಳವಣಿಗೆಗೆ ಒಳ್ಳೆಯ ಸಲಹೆಗಳು ಬರಬಹುದು ಎಂದು ಹೇಳಿದ್ದಾರೆ.

ಇನ್ನು ಆಪರೇಶನ್ ಕಮಲದ ಕುರಿತು ಪ್ರತಿಕ್ರಿಯಿಸಿದ ಅವರು, ಯಾವುದೇ ಶಾಸಕರು ಆಪರೇಶನ್ ಕಮಲಕ್ಕೆ ಒಳಗಾಗುತ್ತಿರುವ ಬಗ್ಗೆ ನನಗೆ ಮಾಹಿತಿ ದೊರಕ್ಕಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

Advertisement

ಮುಂದಿನ ದಿನಗಳಲ್ಲಿ ನಿಮಗೆ ಸಚಿವ ಸ್ಥಾನ ಸಿಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿ, “ಅನೇಕ ಕಾರಣಗಳಿಂದ ಮಂತ್ರಿಗಳನ್ನು ಆಯ್ಕೆ ಮಾಡುತ್ತಾರೆ. ನನಗೆ ಸಚಿವ ಸ್ಥಾನ ಸಿಗದಿರುವ ಬಗ್ಗೆ ಬೇಸರವಿಲ್ಲ. ಜಿಲ್ಲೆ ಮತ್ತು ರಾಜ್ಯ ಅಭಿವೃದ್ಧಿಯಾಗಬೇಕು” ಎಂದು ತಿಳಿಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement