ಹುಲಿ ಉಗುರು ಕೇಸ್‌: ಜಗ್ಗೇಶ್‌ ವಿರುದ್ಧದ ನೋಟಿಸ್‌ಗೆ ತಡೆ ನೀಡಿದ ಹೈಕೋರ್ಟ್‌

ಬೆಂಗಳೂರು:ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್‌ ಎರಡು ದಿನಗಳ ಹಿಂದೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ನೋಟಿಸ್ ನೀಡಲಾಗಿತ್ತು. ಹೀಗಾಗಿ ಇದಕ್ಕೆ ತಡೆ ನೀಡಬೇಕು ಎಂದು ಜಗ್ಗೇಶ್ ಅವರು ಹೈಕೋರ್ಟ್​ ಮೊರೆ ಹೋಗಿದ್ದರು.

ಇದೀಗ ಜಗ್ಗೇಶ್ ಪರವಾಗಿ ಕೋರ್ಟ್​ ಆದೇಶ ನೀಡಿದೆ. ಜಗ್ಗೇಶ್ ವಿರುದ್ಧ ಅರಣ್ಯಾಧಿಕಾರಿಗಳ ನೋಟಿಸ್​ಗೆ ಹೈಕೋರ್ಟ್ ತಡೆ ನೀಡಿದೆ. ಇದರಿಂದ ಜಗ್ಗೇಶ್​ ಅವರಿಗೆ ದೊಡ್ಡ ರಿಲೀಫ್ ಸಿಕ್ಕಿದೆ.
ಜಗ್ಗೇಶ್ ವಿರುದ್ಧದ ಕ್ರಮ ಕಾನೂನುಬಾಹಿರವೆಂದು ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದಿಸಿದರು. ವಾದವನ್ನು ಅಲಿಸಿದ ಬಳಿಕ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ.

ಜಗ್ಗೇಶ್​ಗೆ ಅವರ ತಾಯಿ ಹುಲಿಯ ಉಗುರಿನ ಪೆಂಡೆಂಟ್​ ನೀಡಿದ್ದರು. ಇದನ್ನು ಜಗ್ಗೇಶ್ ಧರಿಸುತ್ತಿದ್ದರು. ಈ ಬಗ್ಗೆ ಸಂದರ್ಶನ ಒಂದರಲ್ಲಿ ಅವರು ಹೇಳಿದ್ದರು.

Advertisement

ಹೀಗಾಗಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಅರೆಸ್ಟ್ ಆದ ಬಳಿಕ ಜಗ್ಗೇಶ್ ಅವರು ಸಂದರ್ಶನದಲ್ಲಿ ಹೇಳಿದ ಮಾತು ವೈರಲ್ ಮಾಡಲಾಯಿತು.

ಜಗ್ಗೇಶ್ ಹೇಳಿಕೆ ವೈರಲ್ ಆದ ಬೆನ್ನಲ್ಲೇ ಅರಣ್ಯಾಧಿಕಾರಿಗಳು ಜಗ್ಗೇಶ್ ಮನೆಗೆ ತೆರಳಿದ್ದರು. ಜೊತೆಗೆ ಮನೆಯನ್ನು ಶೋಧ ಮಾಡಿದ್ದರು. ವಿಚಾರಣೆಗೆ ಹಾಜರಾಗಲು ಜಗ್ಗೇಶ್​​ಗೆ ನೋಟಿಸ್ ಕೂಡ ನೀಡಲಾಯಿತು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement