ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಸರ್ಕಾರಿ ಬಸ್- ಮಗು ಸೇರಿ ಮೂವರು ದುರ್ಮರಣ

ಅಮರಾವತಿ : ಸರ್ಕಾರಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಪರಿಣಾಮ 10 ತಿಂಗಳ ಮಗು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಂಧ್ರಪದೇಶದ ವಿಜಯವಾಡದಲ್ಲಿ ನ. 6 ರಂದು ಸಂಭವಿಸಿದೆ.

ಬೆಳಿಗ್ಗೆ ಸುಮಾರು 8:30ರ ಸಮಯಕ್ಕೆ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ವಿಜಯವಾಡದಿಂದ ಗುಂಟೂರಿಗೆ ತೆರಳುವ ಬಸ್‌. ವಿಜಯವಾಡದ ನೆಹರು ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ ಒಂದರಲ್ಲಿ ನಿಂತಿತ್ತು. ಹೊರಡುವ ವೇಳೆ ಚಾಲಕ ಬಸ್ಸನ್ನು ಹಿಂತೆಗೆಯಲು ಮುಂದಾದ. ಆದರೆ ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಏಕಾಏಕಿ ಮುಂದೆ ಪ್ಲಾಟ್‌ ಫಾರ್ಮ್‌ ಮೇಲೆ ಏರಿದೆ. ಎದುರುಗಡೆ ನಿಂತಿದ್ದ ಮೂವರನ್ನು ಬಲಿ ಪಡೆದಿದೆ.

ಇನ್ನು ಈ ವೇಳೆ ಬಸ್ ಗಾಗಿ ಕಾಯುತ್ತಿದ್ದ ಹಲವು ಮಂದಿಗೆ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಘಟನೆಯ ದೃಶ್ಯ ಬಸ್ ನಿಲ್ದಾಣದಲ್ಲಿರುವ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Advertisement

ಈ ಘಟನೆ ಕುರಿತು ರೀಜನಲ್ ಮ್ಯಾನೇಜರ್ ಎಂ ಯೇಸು ದಾನಂ ಅವರು, ಬಸ್ ಚಾಲಕ ರಿವರ್ಸ್ ಗೇರ್ ಹಾಕುವ ಬದಲು ಬಸ್ ಮುಂದಕ್ಕೆ ಚಲಿಸುವ ಗೇರ್ ಹಾಕಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದಿದ್ದಾರೆ.

ಆಂಧ್ರಪ್ರದೇಶದ ಸಿಎಂ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು  ಘಟನೆಗೆ ಸಂತಾಪ ಸೂಚಿಸಿದ್ದು, ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement