ಜವಾಹರ್ ನವೋದಯ ವಿದ್ಯಾಲಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

 

ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 9 ಮತ್ತು 11ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ನ. 15 ರವರೆಗೆ ವಿಸ್ತರಿಸಲಾಗಿದೆ.             

https://cbseitms.nic.in/2023/nvsix/PrincipalLogin/getafflictionno  ವೈಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Advertisement

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಚಿತ್ರದುರ್ಗ ಜಿಲ್ಲೆಯ ಖಾಯಂ ನಿವಾಸಿಯಾಗಿರಬೇಕು. ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿರುವ ಸರ್ಕಾರ, ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ 2023-24ರ ಶೈಕ್ಷಣಿಕ ಅವಧಿಯಲ್ಲಿ 8ನೇ ಮತ್ತು 10ನೇ ತರಗತಿಯಲ್ಲಿ ಓದುತ್ತಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

9ನೇ ತರಗತಿಗೆ ಅರ್ಜಿ ಸಲ್ಲಿಸಲು 2009 ಮೇ 05 ರಿಂದ 2011ರ ಜುಲೈ 31 ರ ನಡುವೆ ಜನಿಸಿರಬೇಕು. 11ನೇ ತರಗತಿಗೆ ಅರ್ಜಿ ಸಲ್ಲಿಸಲು 2007 ಜೂನ್ 01 ರಿಂದ 2009 ಜುಲೈ 31 ರ ನಡುವೆ ಜನಿಸಿರಬೇಕು. ಎಸ್‍ಸಿ, ಎಸ್‍ಟಿ, ಒಬಿಸಿ ವರ್ಗಗಳಿಗೆ ಸೇರಿದಂತೆ ಎಲ್ಲಾ ವರ್ಗದ ಅಭರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement