ಸೂರತ್‌ ರೈಲು ನಿಲ್ದಾಣದಲ್ಲಿ ಕಾಲ್ತುಳಿತ – ಓರ್ವ ಸಾವು, ಹಲವು ಮಂದಿ ಗಾಯ

ಗುಜರಾತ್: ರೈಲು ನಿಲ್ದಾಣದಲ್ಲಿ ಶನಿವಾರ ಕಾಲ್ತುಳಿತ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡ ಘಟನೆ ಸೂರತ್ ನಲ್ಲಿ ನಡೆದಿದೆ.

ದೀಪಾವಳಿ ಹಬ್ಬಕ್ಕೆ ಊರು ಗಳಿಗೆ ತೆರಳುವ ಹಿನ್ನಲೆ ಭಾರೀ ಸಂಖ್ಯೆಯ ಜನರು ವಿವಿಧ ರಾಜ್ಯಗಳಿಗೆ ಹೋಗಲು ನಿಲ್ದಾಣಕ್ಕೆ ಅಗಮಿಸಿದ್ದರು. ಹೀಗಾಗಿ ರೈಲು ಹತ್ತುವ ವೇಳೆ ಕಾಲ್ತುಳಿತ ಸಂಭವಿಸಿ ಓರ್ವ ವ್ಯಕ್ತಿ ಸಾವು, ಹಲವರು ಪ್ರಜ್ಞೆ ತಪ್ಪಿದ್ದಾರೆ ಎನ್ನಲಾಗುತ್ತಿದೆ. ಗಾಯಾಳುಗಳಿಗೆ ತಕ್ಷಣ ವೈದ್ಯಕೀಯ ನೆರವು ನೀಡಲಾಯಿತು. ಅಲ್ಲದೇ ಸೂರತ್ನ ಸಂಸದ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ದರ್ಶನಾ ಜರ್ದೋಶ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳೊಂದಿಗೆ ಸಮಾಲೋಚಿಸಿದ್ದಾರೆ.

ಹಬ್ಬದ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಜನಸಂದಣಿ ನಿರ್ವಹಣೆಗೆ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ. ಸುಮಾರು165 ಅರ್‌ಪಿಎಫ್‌ ಮತ್ತು ಸಿಪಿಆರ್‌ ನ್ನು ಸೂರತ್ ನಿಲ್ದಾಣದಲ್ಲಿ ನಿಯೋಜಿಸಲಾಗಿದೆ ಮತ್ತು ಹೆಚ್ಚುವರಿ ಕೌಂಟರ್‌ ಗಳನ್ನು ತೆರೆಯಲಾಗಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement