ವಚನ : —ವಚನಭಂಡಾರಿ ಶಾಂತರಸ

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ನಿನ್ನ ಸೋದಿಸುವಡೆ ಎನ್ನ ಕೈಯಲ್ಲಿ ಆಗದು.

ಎಳ್ಳಿನೊಳಗಣ ಎಣ್ಣೆಯಂತೆ, ಹಣ್ಣಿನೊಳಗಣ ರುಚಿಯಂತೆ,

ಹೂವಿನೊಳಗಣ ಸಂಜ್ಞೆಯಂತೆ, ತರುಧರ ಅಗ್ನಿಯ ಕೂಟದಂತೆ,

ಕಂಡಡೆ ಕರಗಿ, ಕಾಣದಡೆ ಬಿರುಬಾಗಿ, ಇವರಂಗವ ಕಂಡು ಅಡಗಿದೆಯೆ ?

ನಿನ್ನ ಸಂಗವನರಿವುದಕ್ಕೆ ಎನ್ನಂಗದ ಇರವಾವುದು ?

ತನುವ ದಂಡಿಸುವುದಕ್ಕೆ ನೀ ಸರ್ವಮಯ, ನಿನ್ನ ಖಂಡಿಸುವದಕ್ಕೆ ನೀ ಪರಿಪೂರ್ಣ.

ಎನ್ನ ಮರೆದು, ನಿನ್ನ ಕಾಬುದಕ್ಕೆ ಒಳಗಿಲ್ಲ.

ನಿನ್ನ ಕಾಬುದಕ್ಕೆ ನೀ ಅಲೇಖಮಯ ಅನಂತಶೂನ್ಯ, ಕಲ್ಲಿನ ಮರೆಯಾದೆಯಲ್ಲಾ, ಎಲ್ಲರಿಗೆ ಅಂಜಿ.

 

-ವಚನಭಂಡಾರಿ ಶಾಂತರಸ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement