ವಿದ್ಯುತ್ ಅವಘಡದಲ್ಲಿ ತಾಯಿ-ಮಗು ಸಾವಿಗೆ ಇಲಿ ಕಾರಣ ಎಂದ ಸಚಿವ ಕೆ.ಜೆ ಜಾರ್ಜ್

ಬೆಂಗಳೂರು: ವಿದ್ಯುತ್ ಲೈನ್ ತುಳಿದು ತಾಯಿ-ಮಗು ಮೃತಪಟ್ಟ ಪ್ರಕರಣ ಇತ್ತೀಚೆಗೆ ಬೆಂಗಳೂರಿನ ಓ ಫಾರ್ಮ್ ವೃತ್ತದ ಬಳಿ ನಡೆದಿತ್ತು. ಈ ಬಗ್ಗೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಇಂಧನ ಸಚಿವ ಕೆ.ಜೆ ಜಾರ್ಜ್, ತಾಯಿ-ಮಗು ಸಾವಿಗೆ ಇಲಿ ಕಾರಣ ಎಂದಿದ್ದಾರೆ.

ಔದುಂಬರ ಹೋಮ್ಸ್ ಅಪಾರ್ಟ್‌ಮೆಂಟ್‌ನಲ್ಲಿ ಖಾಸಗಿ ಟ್ರಾನ್ಸ್‌ಫಾರ್ಮರ್ ಅನ್ನು ಹಾಕಿಕೊಳ್ಳಲಾಗಿದ್ದು, ಅದರಲ್ಲಿ ಇಲಿ ಹೋಗಿ ಹಾಳು ಮಾಡಿದ್ದರಿಂದ ಟ್ರಿಪ್‌ ಆಗಿ ಈ ಅವಘಡ ಉಂಟಾಗಿದೆ ಎಂದು ಜಾರ್ಜ್ ಹೇಳಿದರು. ಈ ವಿದ್ಯುತ್ ಅವಘಡ ಆಗಬಾರದಿತ್ತು. ವಿದ್ಯುತ್‌ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಉಪ ನಿರ್ದೇಶಕರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ತನಿಖೆಗಾಗಿ 4 ಕಮಿಟಿಗಳನ್ನು ಮಾಡಿದ್ದೇವೆ. ಅಲ್ಲಿನ 5 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪೊಲೀಸರು ಕೂಡ ಕ್ರಮ ತೆಗೆದುಕೊಂಡಿದ್ದಾರೆ. ಒಟ್ಟು ಮೂರು ಮಾದರಿಯಲ್ಲಿ ತನಿಖೆ ನಡೆಸಲಾಗುತ್ತಿದೆ. ಬೆಸ್ಕಾಮ್ ಆಂತರಿಕ ತನಿಖೆ ಕೈಗೊಂಡಿದ್ದಾರೆ ಎಂದು ಸಚಿವ ಜಾರ್ಜ್ ಹೇಳಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement