8 ಮಾಜಿ ನೌಕಾಪಡೆಯ ಯೋಧರಿಗೆ ಮರಣದಂಡನೆ ವಿರುದ್ಧ ಭಾರತದ ಮನವಿ ಸ್ವೀಕರಿಸಿದ ಕತಾರ್

ನವದೆಹಲಿ:ಗೂಢಾಚಾರದ ಆರೋಪದ ಮೇಲೆ ಕಳೆದ ತಿಂಗಳು ಶಿಕ್ಷೆಗೆ ಗುರಿಯಾಗಿದ್ದ 8 ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗೆ ಮರಣದಂಡನೆ ವಿಧಿಸುವುದರ ವಿರುದ್ಧ ಭಾರತ ಸಲ್ಲಿಸಿದ್ದ ಮೇಲ್ಮನವಿಯನ್ನು ಕತಾರ್ ನ್ಯಾಯಾಲಯ ಸ್ವೀಕರಿಸಿದೆ.

ಭಾರತ ಸಲ್ಲಿಸಿದ ಮೇಲ್ಮನವಿಯನ್ನು ಕತಾರ್ ನ್ಯಾಯಾಲಯ ಪರಿಶೀಲಿಸಿದ ನಂತರ ವಿಚಾರಣೆಯ ದಿನಾಂಕವನ್ನು ನಿಗದಿಪಡಿಸುತ್ತದೆ ಎಂದು ಮೂಲಗಳು ತಿಳಿಸಿವೆ.

ವರದಿಗಳ ಪ್ರಕಾರ ಗೂಢಾಚಾರಿಕೆ ಆರೋಪದ ಮೇಲೆ ಕತಾರ್‌ನ ಗುಪ್ತಚರ ಸಂಸ್ಥೆಯು 2022ರ ಆಗಸ್ಟ್‌ನಲ್ಲಿ ಭಾರತದ ನೌಕಾಪಡೆ 8 ಮಾಜಿ ಸಿಬ್ಬಂದಿಯನ್ನು ಬಂಧಿಸಿತು.

Advertisement

ಆದರೆ ಕತಾರ್‌ನ ಅಧಿಕಾರಿಗಳು ಅವರ ವಿರುದ್ಧದ ಆರೋಪಗಳನ್ನು ಇನ್ನೂ ಬಹಿರಂಗಪಡಿಸಿಲ್ಲ. ಅವರ ಜಾಮೀನು ಅರ್ಜಿಗಳನ್ನು ಹಲವಾರು ಬಾರಿ ತಿರಸ್ಕರಿಸಲಾಯಿತು. ಕಳೆದ ತಿಂಗಳು ಅವರ ವಿರುದ್ಧದ ತೀರ್ಪನ್ನು ಕತಾರ್‌ನ ಪ್ರಥಮ ನಿದರ್ಶನದ ನ್ಯಾಯಾಲಯವು ಪ್ರಕಟಿಸಿತು.

ಕಮಾಂಡರ್ ಪೂರ್ಣೇಂದು ತಿವಾರಿ, ಕಮಾಂಡರ್ ಸುಗುಣಾಕರ್ ಪಕಾಲ, ಕಮಾಂಡರ್ ಅಮಿತ್ ನಾಗ್ಪಾಲ್, ಕಮಾಂಡರ್ ಸಂಜೀವ್ ಗುಪ್ತಾ, ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕ್ಯಾಪ್ಟನ್ ಸೌರಭ್ ವಸಿಷ್ಟ್ ಮತ್ತು ನಾವಿಕ ರಾಗೇಶ್ ಗೋಪಕುಮಾರ್ ಬಂಧಿತ ಭಾರತೀಯ ನೌಕಾಪಡೆಯ ಮಾಜಿ ಯೋಧರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement