ಉತ್ತರಕನ್ನಡ: ಕೆಎಸ್ ಆರ್ ಟಿಸಿ ಬಸ್-ಕಾರು ಡಿಕ್ಕಿ ; ಐವರು ಮೃತ್ಯು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ಬಳಿ ಕೆಎಸ್​ ಆರ್​ ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಐವರು ದುರ್ಮರಣ ಹೊಂದಿದ್ದು, ಹಲವರು ಗಾಯಗೊಂಡಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ್ ಬಳಿ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಮೃತಪಟ್ಟವರನ್ನು ತಮಿಳುನಾಡು ಮೂಲದವರು ಎನ್ನಲಾಗಿದೆ.

ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್​ ಆರ್​ ಟಿಸಿ ಬಸ್​​​​ ಬಂಡಲ್ ಬಳಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಮತ್ತಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Advertisement

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಇನ್ನು ಬಸ್​ನ ಮುಂಭಾಗದ ಗಾಜು ಒಡೆದಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement