ಅಕ್ರಮ ಮೊಬೈಲ್ ಟವರ್‌ ಸಂಸ್ಥೆಗಳಿಗೆ ದಂಡ ವಿಧಿಸಲು ಸಿ.ಎಂ ಸೂಚನೆ

ಬೆಂಗಳೂರು : ರಾಜ್ಯಾದ್ಯಂತ ಅಕ್ರಮವಾಗಿ ಮೊಬೈಲ್ ಟವರ್‌ಗಳನ್ನು ಸ್ಥಾಪಿಸಿರುವ ಸಂಸ್ಥೆಗಳಿಗೆ ದಂಡ ವಿಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಾಂಗ್ರೆಸ್ ಮಾಜಿ ಶಾಸಕ ರಮೇಶ್ ಅವರು ಅಕ್ರಮವಾಗಿ ಟವರ್‌ಗಳನ್ನು ಅಳವಡಿಸಿರುವ ಟೆಲಿಕಾಂ ಸೇವಾ ಪೂರೈಕೆದಾರರಿಗೆ ರಾಜ್ಯ ಸರ್ಕಾರ ದಂಡ ವಿಧಿಸಬೇಕು ಎಂದು ಮನವಿ ಸಲ್ಲಿಸಿದ್ದರು.
ಅದನ್ನು ಪರಿಗಣಿಸಿ ಸಿದ್ದರಾಮಯ್ಯ ಈ ನಿರ್ದೇಶನ ನೀಡಿದ್ದಾರೆ.ಈ ಮೂಲಕ ರಾಜ್ಯವು 7,000 ಕೋಟಿ ರೂಪಾಯಿಗಳನ್ನು ಸಂಗ್ರಹಿಸಬಹುದು ಎಂದು ಅವರು ಹೇಳಿದ್ದಾರೆ.

ಸಿಎಂಗೆ ಸಲ್ಲಿಸಿದ್ದ ಮನವಿ ಪತ್ರದಲ್ಲಿ ರಮೇಶ್ ರವರು ರಾಜ್ಯದಲ್ಲಿರುವ ಟವರ್‌ಗಳ ಪೈಕಿ ಹಲವನ್ನು ಇನ್​ಸ್ಟಾಲೇಶನ್ ಚಾರ್ಜಸ್ ಪಾವತಿಸದೆ ಸ್ಥಾಪಿಸಲಾಗಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ದೊಡ್ಡ ನಷ್ಟವಾಗಿದೆ ಎಂದು ಉಲ್ಲೇಖಿಸಿದ್ದರು.

Advertisement

ಇತರ ರಾಜ್ಯಗಳು ಮೊಬೈಲ್ ಟವರ್‌ಗಳಿಂದ 2 ಲಕ್ಷ ರೂ.ವರೆಗೆ ಶುಲ್ಕವನ್ನು ಸಂಗ್ರಹಿಸುತ್ತವೆ. ಕರ್ನಾಟಕ ಕೂಡ ಶುಲ್ಕ ಹೆಚ್ಚಿಸಬೇಕು ಎಂದು ಅವರು ಸಲಹೆ ನೀಡಿದ್ದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement