ಶಾಸಕ ಬಿ.ಆರ್ ಪಾಟೀಲ್ ಆಪ್ತ ಬಸವರಾಜ್ ಚೌಲ್ ಪುತ್ರನ ಹತ್ಯೆ

ಕಲಬುರಗಿ: ಶಾಸಕ ಬಿ.ಆರ್ ಪಾಟೀಲ್ ಆಪ್ತ ಕಾಂಗ್ರೆಸ್‌ ಮುಖಂಡ ಬಸವರಾಜ್ ಚೌಲ್ ಪುತ್ರನನ್ನು  ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಆಳಂದ ಪಟ್ಟಣದ ಹೊರವಲಯದ ಜಿಡಗಾ ರಸ್ತೆಯಲ್ಲಿ ಘಟನೆ ನಡೆದಿದ್ದು, ಕಾಂಗ್ರೆಸ್ ಮುಖಂಡನ ಪುತ್ರ ಚಂದ್ರಶೇಖರ್ ಚೌಲ್ (21) ಹತ್ಯೆಗೀಡಾಗಿದ್ದಾನೆ.

ಚಂದ್ರಶೇಖರ್ ಚೌಲ್ ಅವರು ಸ್ನೇಹಿತರಿಂದಲೇ ಹತ್ಯೆಯಾಗಿದೆ ಎಂದು ಶಂಕೆ ವ್ಯಕ್ತವಾಗಿದೆ. ಸಾವಿಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ.

Advertisement

ಸ್ಥಳಕ್ಕೆ ಭೇಟಿ ನೀಡಿದ ಆಳಂದ ಪಟ್ಟಣದ ಪೊಲೀಸರು ಪರಿಶೀಲಿಸಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement