ಮಾಲ್ಡೀವ್ಸ್ – ಭಾರತ ಬಿಕ್ಕಟ್ಟು: ಲಕ್ಷದ್ವೀಪದ ಬಗ್ಗೆ ಇಸ್ರೇಲ್ ನಿಂದ ಹೊಸ ಪೋಸ್ಟ್

ನವದೆಹಲಿ: ಭಾರತ-ಮಾಲ್ಡೀವ್ಸ್ ನಡುವೆ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ ಲಕ್ಷದ್ವೀಪದಲ್ಲಿ ನಿರ್ಲವಣೀಕರಣ(ನೀರಿನಿಂದ ಉಪ್ಪನ್ನು ಬೇರ್ಪಡಿಸುವ ಪ್ರಕ್ರಿಯೆ) ಕಾರ್ಯವನ್ನು ಆರಂಭಿಸುವುದಾಗಿ ಇಸ್ರೇಲ್ ಘೋಷಿಸಿದೆ.

ಕೇಂದ್ರ ಸರ್ಕಾರದ ಕೋರಿಕೆಯ ಮೆರೆಗೆ ನಿರ್ಲವಣೀಕರಣ ಕಾರ್ಯಕ್ರಮವನ್ನು ಪ್ರಾರಂಭಿಸಲು ನಾವು ಕಳೆದ ವರ್ಷ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದೆವು. ನಾಳೆಯಿಂದಲೇ ಈ ಯೋಜನೆಯ ಕೆಲಸವನ್ನು ಪ್ರಾರಂಭಿಸಲು ಇಸ್ರೇಲ್ ತಯಾರಾಗಿದೆ ಎಂದು #ExploreIndianIslands ಎಂಬ ಹ್ಯಾಶ್ ಟ್ಯಾಗ್ ಬಳಸಿ ಭಾರತದಲ್ಲಿನ ಇಸ್ರೇಲ್ ರಾಜತಾಂತ್ರಿಕ ಕಚೇರಿಯು ಪೋಸ್ಟ್ ಮಾಡಿದೆ.

ಲಕ್ಷದ್ವೀಪದಲ್ಲಿರುವ ಹಳೆಯ ಭಾರತೀಯ ಕಡಲತೀರಗಳ ಫೋಟೋಗಳನ್ನು ಹಂಚಿಕೊಂಡಿರುವ ರಾಯಭಾರ ಕಚೇರಿಯು ಲಕ್ಷದ್ವೀಪಗಳ ಪ್ರಾಚೀನ ಮತ್ತು ಭವ್ಯವಾದ ನೀರೊಳಗಿನ ಸೌಂದರ್ಯವನ್ನು ಇನ್ನೂ ವೀಕ್ಷಿಸಲು ಸಾಧ್ಯವಾಗದವರಿಗೆ ಈ ದ್ವೀಪದ ಮೋಡಿಮಾಡುವ ಆಕರ್ಷಣೆಯನ್ನು ತೋರಿಸುವ ಕೆಲವು ಚಿತ್ರಗಳು ಇಲ್ಲಿವೆ ಎಂದು ಬರೆದುಕೊಂಡಿದೆ.

Advertisement

ಇನ್ನು ಮಾಲ್ಡೀವ್ಸ್ ನ ಯುವ ಸಬಲೀಕರಣ, ಮಾಹಿತಿ ಮತ್ತು ಕಲೆಯ ಉಪ ಸಚಿವ ಮರಿಯಾಂ ಶಿಯುನಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಸ್ರೇಲ್ ಕೈಗೊಂಬೆ ಎಂದು ಅಣಕಿಸಿ, ನಂತರ ಆ ಪೋಸ್ಟನ್ನು ಅಳಿಸಿ ಹಾಕಿದ್ದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement