‘ಯುವನಿಧಿ’ಗೆ ಈವರೆಗೆ 90,697 ಅಭ್ಯರ್ಥಿಗಳು ನೋಂದಣಿ

ಬೆಂಗಳೂರು: ಕಾಂಗ್ರೆಸ್ ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯೋಜನೆ ‘ಯುವನಿಧಿ’ಗೆ ರಾಜ್ಯದಾದ್ಯಂತ ಈವರೆಗೆ 90,697 ಮಂದಿ ನೋಂದಣಿ ಮಾಡಿಕೊಂಡಿದ್ದು ಈ ಪೈಕಿ ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅರ್ಜಿ ಸಲ್ಲಿಸಿ ಮೊದಲ ಸ್ಥಾನದಲ್ಲಿದೆ.

ಶುಕ್ರವಾರ ಮಧ್ಯಾಹ್ನದವರೆಗೆ ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಂಡ ಸಂಖ್ಯೆಗಳ ಪೈಕಿ ಬೆಳಗಾವಿ ಜಿಲ್ಲೆಯಿಂದ 9,633 ಅರ್ಜಿ, ಬೆಂಗಳೂರು ನಗರ – 6,657 ಹಾಗೂ ಬಾಗಲಕೋಟೆ- 4,899 ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿ ಸಲ್ಲಿಕೆಯಲ್ಲಿ ಕೊಡಗು ಜಿಲ್ಲೆ ಕೊನೆ ಸ್ಥಾನದಲ್ಲಿದೆ.

ಏನಿದು ಯುವನಿಧಿ ಯೋಜನೆ: 2022-23ನೇ ಸಾಲಿನಲ್ಲಿ ಪದವಿ, ಡಿಪ್ಲೊಮಾ ತೇರ್ಗಡೆ ಆಗಿ 6 ತಿಂಗಳಿನಿಂದ ಉದ್ಯೋಗ ಸಿಗದೇ ರಾಜ್ಯದಲ್ಲಿ ವಾಸ ಇರುವವರಿಗೆ ಈ ಯುವನಿಧಿ ಯೋಜನೆ ಅನ್ವಯವಾಗಲಿದೆ. ಪದವೀಧರ ನಿರುದ್ಯೋ ಗಿಗಳಿಗೆ ತಿಂಗಳಿಗೆ ₹3 ಸಾವಿರ ಮತ್ತು ಡಿಪ್ಲೊಮಾ ತೇರ್ಗಡೆಯಾದ ನಿರುದ್ಯೋಗಿಗಳಿಗೆ ತಿಂಗಳಿಗೆ ₹1,500 ಸಿಗಲಿದೆ. ನಿರುದ್ಯೋ ಗ ಭತ್ಯೆ ಎರಡು ವರ್ಷಗಳ ಅವಧಿಗೆ ಮಾತ್ರ ಇರುತ್ತದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement