ನಾನು ನನ್ನ ಸ್ವ-ಇಚ್ಛೆಯಿಂದ ರಾಜೀನಾಮೆ ನೀಡಿದೆನೆ‌ -‘ರಾಜೀನಾಮೆ ಪತ್ರ’ ವೈರಲ್

ನವದೆಹಲಿ : ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಪಕ್ಷದ ವಿರುದ್ದ ತಿರುಗಿ ಬಿದ್ದು ಕಾಂಗ್ರೇಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇದೀಗ ಮತ್ತೆ ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ.

ಇಂದು ಕಾಂಗ್ರೆಸ್‌ಗೆ ರಾಜೀನಾಮೆ ನೀಡುವುದರ ಜೊತೆಗೆ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ದೆಹಲಿಯಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿರುವ ಶೆಟ್ಟರ್, ಜೆಪಿ ನಡ್ಡಾ ನೇತೃತ್ವದಲ್ಲಿ ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ.
ವಿಧಾನಪರಿಷತ್ತು ಸದಸ್ಯತ್ವಕ್ಕೆ ರಾಜೀನಾಮೆ: ಕರ್ನಾಟಕ ವಿಧಾನಪರಿಷತ್ತು ಸದಸ್ಯತ್ವಕ್ಕೆ ಈ ದಿನ ನಾನು ನನ್ನ ಸ್ವ-ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದೇನೆ.

ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಿಬೇಕಾಗಿ ವಿನಂತಿ. ಇಲ್ಲಿಯವರೆಗೆ ತಾವು ನೀಡಿದ ಸಹಕಾರಕ್ಕಾಗಿ ವಂದನೆಗಳು ಎಂದು ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರು ಸ್ಪೀಕರ್‌ ಬಸವರಾಜ ಹೊರಟ್ಟಿ ಅವರಿಗೆ ಬರೆದ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement