‘2024 ರಲ್ಲಿ ಯುದ್ಧದ ಭೀತಿ ಇದೆ’- ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

ಗದಗ: ಈ ವರ್ಷದಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ. ಅಣು ಬಾಂಬ್ ಸ್ಪೋಟಗೊಳ್ಳುವ ಸಾಧ್ಯತೆ ಇದೆ. 2024 ರಲ್ಲಿ ಯುದ್ಧದ ಭೀತಿ ಇದೆ. ಜಗತ್ತಿನ ಪ್ರಭಾವಿ ಸಂತರೊಬ್ಬರು, ಪ್ರಧಾನಿಗಳಿಬ್ಬರು ಸಾವಿಗೀಡಾಗುವ ಸಂಭವವಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ‌ಮಹಾಸ್ವಾಮಿಗಳು ಭವಿಷ್ಯ ಹೇಳಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2024 ರಲ್ಲಿ ಜನರು ತಲ್ಲಣ ಆಗುವಂತಹ ಸಾಧ್ಯತೆ ಇದೆ. ಜಲಕಂಟಕ, ಅಕಾಲಿಕ ಮಳೆ, ಭೂಕಂಪವಾಗುವಂತಹ ಭೀತಿಯಿದೆ. ಜಗತ್ತಿನ ಪ್ರಭಾವಿ ಸಂತರೊಬ್ಬರು ಹತ್ಯೆಗೀಡಾಗುವ ಸಂಭವವಿದೆ. ಒಂದೆರಡು ಪ್ರಧಾನಿಗಳ ಸಾವು ಸಂಭವಿಸಲಿದೆ ಎಂದರು.

ಅಸ್ಥಿರತೆ ಇದ್ದು, ಯುದ್ಧದ ಭೀತಿ ಇದೆ. ಅಣು ಬಾಂಬ್ ಸ್ಪೋಟದಿಂದಾಗಿ ಪ್ರಪಂಚಕ್ಕೆ ಹಾನಿಯಾಗುವ ಸಾಧ್ಯತೆ ಇದೆ. ಇದರಿಂದ ರೋಗ ರುಜಿನಗಳು ಹೆಚ್ಚಾಗಲಿವೆ. ಒಟ್ಟಿನಲ್ಲಿ 2024 ಜಗತ್ತಿಗೆ ಅಪಾಯವಿದೆ ಎಂದು ಅವರು ಭವಿಷ್ಯ ನುಡಿದ್ದಾರೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement