‘ಸಿದ್ಧಗಂಗಾ ಶ್ರೀಗಳಿಗೂ ಭಾರತ ರತ್ನ ನೀಡಬೇಕು’ – ಡಿಕೆ ಶಿವಕುಮಾರ್ ಆಗ್ರಹ

ವಿಜಯಪುರ: ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನವನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಇದೀಗ ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಅಡ್ವಾಣಿ ದೇಶದ ಹಿರಿಯ ರಾಜಕಾರಣಿ. ಅವರಿಗೆ ಭಾರತ ರತ್ನ ನೀಡಿದ್ದಕ್ಕೆ ನಮ್ಮ ತಕರಾರೇನೂ ಇಲ್ಲ. ಆದರೆ ನಡೆದಾಡುವ ದೇವರೆಂದೇ ಖ್ಯಾತರಾದ ಸಿದ್ಧಗಂಗಾ ಮಠಾಧೀಶ ಡಾ. ಶಿವಕುಮಾರ ಸ್ವಾಮೀಜಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಬೆಕೇಂದು ಆಗ್ರಹಿಸಿದರು.

ಇನ್ನು ಈ ಹಿಂದೆಯೇ ನಮ್ಮ ಸರ್ಕಾರ ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲು ಮನವಿ ಮಾಡಿತ್ತು. ಈ ವಿಷಯನ್ನು ಪರಿಗಣನೆಗೆ ತೆಗೆದುಕೊಳ್ಳುವುದು ಅವರಿಗೆ ಬಿಟ್ಟ ವಿಚಾರ. ನಮ್ಮ ರಾಜ್ಯದಲ್ಲಿ ಅನ್ನದಾಸೋಹಕ್ಕೆ ಶ್ರೀಗಳು ಹೆಸರಾಗಿದ್ದವರು. ಅವರಿಗೆ ಗೌರವ ಸಲ್ಲಿಸಬೇಕು ಅನ್ನೋದು ನಮ್ಮ ಉದ್ದೇಶ ಎಂದು ತಿಳಿಸಿದರು.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement