ಲೋಕಸಭೆಯಲ್ಲಿ ವಂದನಾ ನಿರ್ಣಯಕ್ಕೆ ಉತ್ತರ ನೀಡಲಿರುವ ಪ್ರಧಾನಿ ಮೋದಿ

ದೆಹಲಿ: ಸಂಸತ್ತಿನಲ್ಲಿ ಬಜೆಟ್ ಅಧಿವೇಶನದ ಮೊದಲ ದಿನವಾದ ಜ. 31 ರಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಇಂದು ಉತ್ತರ ನೀಡಲಿದ್ದಾರೆ.

ಬಜೆಟ್ ಅಧಿವೇಶನದ ನಾಲ್ಕನೇ ದಿನದಂದು ಕೆಳಮನೆಗೆ ಹಾಜರಾಗುವಂತೆ ಬಿಜೆಪಿ ಲೋಕಸಭೆಯಲ್ಲಿನ ತನ್ನ ಎಲ್ಲಾ ಸಂಸದರಿಗೆ ವಿಪ್ ನೀಡಿದೆ.ವಂದನಾ ನಿರ್ಣಯದಲ್ಲಿ ಪ್ರತಿಪಕ್ಷದ ನಾಯಕರು ಮೊದಲು ಮಾತನಾಡುತ್ತಾರೆ ಮತ್ತು ನಂತರ ಪ್ರಧಾನ ಮಂತ್ರಿ ಅದಕ್ಕೆ ಉತ್ತರಿಸುತ್ತಾರೆ. ಇನ್ನು ವಂದನಾ ನಿರ್ಣಯದ ಮೋದಿ ಭಾಷಣದ ಕುರಿತು ವಿರೋಧ ಪಕ್ಷ ಟೀಕಿಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಪ್ರಧಾನಿ ಮೋದಿಯವರ ಭಾಷಣವನ್ನು ಚುನಾವಣಾ ಭಾಷಣ ಎಂದಿದ್ದಾರೆ.

ವಂದನಾ ನಿರ್ಣಯಕ್ಕೆ ಪ್ರಧಾನಿ ಮೋದಿಯವರ ಉತ್ತರ ಹಾಗೂ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ 2024-25ರ ಜಮ್ಮು ಮತ್ತು ಕಾಶ್ಮೀರದ ಅಂದಾಜು ಖರ್ಚು ಮತ್ತು ವೆಚ್ಚಗಳ ಬಗ್ಗೆಯೂ ಮಾತನಾಡಲಿದ್ದಾರೆ ಎನ್ನಲಾಗುತ್ತಿದೆ.

Advertisement

ಅಲ್ಲದೇ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕುರಿತ ಮಹತ್ವದ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗುವುದು.

ಸಂಸದರಾದ ಪಿ.ಪಿ.ಚೌಧರಿ ಮತ್ತು ಎನ್.ಕೆ.ಪ್ರೇಮಚಂದ್ರನ್ ಅವರು ಪ್ರಾದೇಶಿಕ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಜಾಗತಿಕ ಭಯೋತ್ಪಾದನೆಯನ್ನು ಎದುರಿಸುವ’ ವಿಷಯದ ಕುರಿತು ವಿದೇಶಾಂಗ ವ್ಯವಹಾರಗಳ ಸಮಿತಿಯ 28ನೇ ವರದಿಯನ್ನು ಮಂಡಿಸಲಿದ್ದಾರೆ.

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಕಾರ್ಮಿಕ, ಜವಳಿ ಮತ್ತು ಕೌಶಲ್ಯ ಅಭಿವೃದ್ಧಿ ಸ್ಥಾಯಿ ಸಮಿತಿಯ 49 ನೇ ವರದಿಯಲ್ಲಿನ ‘ತರಬೇತಿ ಮಹಾ ನಿರ್ದೇಶನಾಲಯದ ಕಾರ್ಯನಿರ್ವಹಣೆಯಲ್ಲಿ ಒಳಗೊಂಡಿರುವ ಶಿಫಾರಸುಗಳ ಅನುಷ್ಠಾನದ ಸ್ಥಿತಿಯ ಕುರಿತು ಹೇಳಿಕೆ ನೀಡಲಿದ್ದಾರೆ.

ರಾಜ್ಯಸಭೆಯಲ್ಲಿ, ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ನೀರು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯಿದೆ, 1974 ಅನ್ನು ತಿದ್ದುಪಡಿ ಮಾಡಲು ನೀರು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ, 2024 ಮಸೂದೆಯನ್ನು ಮಂಡಿಸಲಿದ್ದಾರೆ ಎನ್ನಲಾಗುತ್ತಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement