ಮಂಗಳೂರು: ಸಿಎಂ ಕಾರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ; ಕಾರ್ಯಕರ್ತರು ಪೊಲೀಸ್ ವಶ

ಮಂಗಳೂರಿನಲ್ಲಿ ನಡೆಯುವ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಆಗಮಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ ಮಾಡಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಆಗಮಿಸುತ್ತಿದ್ದ ಸಿಎಂ ಅವರ ಕಾರಿಗೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಬೊಂದೇಲ್ ನಲ್ಲಿ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನಕ್ಕೆ ಪ್ರಯತ್ನಿಸಿದ್ದಾರೆ. ತಕ್ಷಣ ಕಾರ್ಯಪ್ರವರ್ತರಾದ ಪೊಲೀಸರು ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾದ ಕಾರ್ಯಕರ್ತರನ್ನು ವಶಕ್ಕೆ ಪಡೆದೆದಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement