ರೈತರ ದೆಹಲಿ ಚಲೋ ಪ್ರತಿಭಟನೆ: 2 ಪೊಲೀಸ್ ಅಧಿಕಾರಿಗಳ ಸಾವು

ಹರಿಯಾಣ: ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ಖಾತ್ರಿ ಕಾನೂನು ಜಾರಿಗೆ ಆಗ್ರಹಿಸಿ ರೈತ ಸಂಘಟನೆಗಳು ಫೆಬ್ರವರಿ 13 ರಿಂದ ದೆಹಲಿ ಚಲೋ ಪ್ರತಿಭಟನೆಯನ್ನು ಕೈಗೊಂಡಿದೆ. ಇದೀಗ ಹರಿಯಾಣದ ಅಂಬಾಲದಲ್ಲಿ ರೈತರ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ 2 ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿ, 30 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಅಂಬಾಲಾ ಪೊಲೀಸರು ಪ್ರೆಸ್​ನೋಟ್ ಬಿಡುಗಡೆ ಮಾಡಿದ್ದಾರೆ. ‘ದೆಹಲಿ ಚಲೋ’ ಪ್ರತಿಭಟನೆ ನಡೆಸುತ್ತಿರುವ ರೈತರು, ಬ್ಯಾರಿಕೇಡ್​ಗಳನ್ನು ಕಿತ್ತು ಹಾಕಲು ನಿರಂತರ ಪ್ರಯತ್ನವನ್ನು ಮಾಡುತ್ತಿದ್ದು, ಪೊಲೀಸರ ಮೇಲು ಕಲ್ಲುಗಳನ್ನು ಎಸೆಯುತ್ತಿದ್ದಾರೆ ಎಂದು ತಿಳಿದಿದ್ದಾರೆ.

ಇನ್ನು ರೈತರ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸಾರ್ವಜನಿಕ ಆಸ್ತಿ-ಪಾಸ್ತಿಗೆ ಕೂಡ ಹಾನಿಯುಂಟು ಮಾಡುತ್ತಿದ್ದಾರೆ. ಈ ಮೂಲಕ ಶಾಂತಿ-ಸುವ್ಯವಸ್ಥೆಗೆ ದಕ್ಕೆ ತರುವ ಪ್ರಯತ್ನ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ನಾಯಕರ ವಿರುದ್ಧ ಪೊಲೀಸರು ನ್ಯಾಷನಲ್ ಸೆಕ್ಯೂರಿಟಿ ಆ್ಯಕ್ಟ್ (NSA) ಅಡಿಯಲ್ಲಿ ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement