ಗಲೀಜು ಬಟ್ಟೆ ಹಾಕಿದ್ದ ಎಂದು ರೈತನಿಗೆ ಅಪಮಾನ; ಮೆಟ್ರೋ ಸಿಬ್ಬಂದಿ ವಜಾ!

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ರೈತನಿಗೆ ಅಪಮಾನ ವಿಚಾರ ಸಂಬಂಧಿಸಿದಂತೆ ವರದಿಗೆ ಎಚ್ಚೆತ್ತುಕೊಂಡ BMRCL ಭದ್ರತಾ ಮೇಲ್ವಿಚಾರಕನನ್ನು ವಜಾ ಮಾಡಲಾಗಿದೆ.

ಬಟ್ಟೆ ಸ್ವಚ್ಛವಾಗಿಲ್ಲ ಎಂದು ವ್ಯಕ್ತಿಯೊಬ್ಬರಿಗೆ ಮೆಟ್ರೋ (Namma Metro) ಸಿಬ್ಬಂದಿ ನಿಲ್ದಾಣದ ಒಳಗೆ ಬಿಡಲು ನಿರಾಕರಿಸಿದ ಘಟನೆ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ನಡೆದಿದ್ದು ಆ ನಂತರ ಈ ಕುರಿತು ವರದಿ ಮಾಡಿದ ಬಳಿಕ ಮೆಟ್ರೋ ಹಿರಿಯ ಅಧಿಕಾರಿ ಯಶವಂತ ಚವಾಣ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

 

Advertisement

ಮೆಟ್ರೋ ಒಳಗೆ ರೈತನನ್ನು ಬಿಡದ ಭದ್ರತಾ ಮೇಲ್ವಿಚಾರಕನನ್ನು ಕೂಡಲೇ ವಜಾಗೊಳಿಸಲಾಗಿದೆ. ಈ ಘಟನೆಯ ಕುರಿತು ತನಿಖೆ ನಡೆಸಲಾಗುವುದು ಎಂದು ಮೆಟ್ರೋ ಹಿರಿಯ ಅಧಿಕಾರಿ ಯಶವಂತ ಚವಾಣ್ ಭರವಸೆ ನೀಡಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement