ಬಾಲ‌ ಮಂಜುನಾಥ ಸ್ವಾಮೀಜಿ ವಿರುದ್ಧ ಅಪ್ರಾಪ್ತೆಯ ಮೇಲೆ ಲೈಂಗಿಕ ಕಿರುಕುಳ ಆರೋಪ ಬಂಧನ.!

 

ತುಮಕೂರು : ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದ ಶ್ರೀ ವಿದ್ಯಾ ಚೌಡೇಶ್ವರಿ ಮಹಾ ಸಂಸ್ಥಾನ ಮಠದ ಬಾಲ‌ ಮಂಜುನಾಥ ಸ್ವಾಮೀಜಿ ವಿರುದ್ಧ ಕೂಡ ಅಪ್ರಾಪ್ತೆಯ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ.

ತಮ್ಮನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಿ, ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಹಂಗರನಹಳ್ಳಿ ಶ್ರೀ ವಿದ್ಯಾಚೌಡೇಶ್ವರಿ ಮಹಾ ಸಂಸ್ಥಾನ ಮಠದ ಬಾಲ‌ ಮಂಜುನಾಥ ಸ್ವಾಮೀಜಿ ದೂರು ಸಲ್ಲಿಸಿದ್ದರು.ಆದರೆ, ಅದೇ ಆರೋಪಿಗಳು ಸ್ವಾಮೀಜಿಯವರ ಬೇರೊಂದು ಹಗರಣವೊಂದನ್ನು ವಿಚಾರಣೆ ವೇಳೆ ಬಯಲು ಮಾಡಿದ್ದಾರೆ. ಹಾಗಾಗಿ, ಪೊಲೀಸರು ಸ್ವಾಮೀಜಿಯವರನ್ನು ಬಂಧಿಸಿದ್ದಾರೆಂದು ಹೇಳಲಾಗಿದೆ.

Advertisement

ಸ್ವಾಮೀಜಿ ಅಭಿಷೇಕ್ ಎನ್ನುವ ವ್ಯಕ್ತಿಗೆ ತಮಗೆ ಚರ್ಮ ರೋಗದ ಕುರಿತಂತೆ ಹೇಳಿಕೊಂಡಿದ್ದರು. ಅಭಿಷೇಕ್ ಮಹಿಳೆಯನ್ನು ಪರಿಚಯಿಸಿ ವೈದ್ಯ ಎಂದು ಹೇಳಿದ್ದ.ಮಹಿಳೆಗೆ ಚರ್ಮ ರೋಗ ತೋರಿಸಲು ಸ್ವಾಮೀಜಿಗೆ ಇಷ್ಟವಿಲ್ಲದ ಕಾರಣ ಅವರ ಮೊಬೈಲ್ ಗೆ ಫೋಟೋ ಕಳುಹಿಸಿದ್ದರು.ವ್ಯಾಧಿಯ ಬಗ್ಗೆ ವೈದ್ಯರ ಬಳಿ ಹೇಳಿಕೊಳ್ಳಲು ಸ್ವಾಮೀಜಿಗೆ ವಿಡಿಯೋ ಕಾಲ್ ನಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಆಗ, ಸ್ವಾಮೀಜಿಯವರು ಚರ್ಮ ವ್ಯಾಧಿಯಿರುವ ಜಾಗವನ್ನು ತೋರಿಸಿದ್ದರು.

ಇದೀಗ ದೇವಸ್ಥಾನದ ಟ್ರಸ್ಟಿ ನೀಡಿದ್ದ ದೂರಿನನ್ವಯ ಪೊಲೀಸರು ಅಭಿಷೇಕ್ ರನ್ನು ಕರೆಯಿಸಿ ವಿಚಾರಣೆ ನಡೆಸಿದಾಗ ಆತ, ಸ್ವಾಮೀಜಿಯವರು ಹಲವು ದಿನಗಳ ಹಿಂದೆ ಮಠದಲ್ಲಿ ಅಪ್ರಾಪ್ತೆಯೊಬ್ಬಳಿಗೆ ಲೈಂಗಿಕ ಕಿರುಕುಳ ಕೊಟ್ಟಿರುವುದಾಗಿ ಆರೋಪಿಸಿದ್ದ. ಈ ವಿಚಾರ ಪೋಕ್ಸೋ ಕಾಯ್ದೆಯಡಿ ಬರುವುದರಿಂದ ಮಠಕ್ಕೆ ಆಗಮಿಸಿದ ಮಠಕ್ಕೆ ಆಗಮಿಸಿದ ಪೊಲೀಸರು, ಗುರುವಾರ ಸಂಜೆಯಿಂದಲೇ ಮಠದಲ್ಲಿ ಪರಿಶೀಲನೆ ನಡೆಸಿದ್ದರು. ಆಗ ಸಿಕ್ಕ ಕೆಲವು ದಾಖಲೆಗಳನ್ನು ಆಧರಿಸಿ, ಸ್ವಾಮೀಜಿಯವರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement