ಮೋದಿಯಂತಹ ದೇವರಿಗೆ ಸ್ವಾಗತ, ಆದರೆ ಆ ಕಾರ್ಯಕ್ರಮಕ್ಕೆ ನಾನು ಹೋಗಲ್ಲ; ಕೆಎಸ್ ಈಶ್ವರಪ್ಪ

ಶಿವಮೊಗ್ಗ: ಇಡೀ ದೇಶದ ಜನರು ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇವರು ಅಂದುಕೊಂಡಿದ್ದಾರೆ. ಅಂತಹ ದೇವರು ನಮ್ಮ ಊರಿಗೆ ಬರುತ್ತಿದ್ದಾರೆ. ನಮ್ಮ ಜನತೆಯ ಪರವಾಗಿ ದೇವರಿಗೆ ಸ್ವಾಗತ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು, ಈ ಸಂಬಂಧ ಸುದ್ದಿಗಾರರು, ನೀವು ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೆಎಸ್ ಈಶ್ವರಪ್ಪ, ನಾನು ಇಂದಿನ ಕಾರ್ಯಕ್ರಮಕ್ಕೆ ಹೋಗಲು ಆಗುತ್ತಿಲ್ಲ. ಪ್ರಧಾನಿ ಮೋದಿಯವರಿಗೆ ನಾನು ಈ ವಿಚಾರವಾಗಿ ಕ್ಷಮೆ ಕೇಳುತ್ತೇನೆ. ನರೇಂದ್ರ ಮೋದಿ ಅವರು ಹಿಂದುತ್ವ ಉಳಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ನಾನು ಪ್ರಧಾನಿ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ ಎಂದು ಹೇಳಿದರು.

ಇಂದು ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಅನಿವಾರ್ಯವಾಗಿ ಭಾಗವಹಿಸುತ್ತಿಲ್ಲ ಎಂದ ಕೆಎಸ್ ಈಶ್ವರಪ್ಪ, ವಿವಿಧ ಮಠಾಧೀಶರು, ದೇವಸ್ಥಾನಗಳಿಗೆ ತೆರಳಿ ಆಶೀರ್ವಾದ ಪಡೆಯುತ್ತೇನೆ. ಶಿವಮೊಗ್ಗದಿಂದ ಗೆದ್ದು ಮತ್ತೆ ಪ್ರಧಾನಿ ಮೋದಿ ಅವರ ಬಳಿ ತೆರಳುತ್ತೇನೆ ಎಂದು ಹೇಳುವ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ತಾನು ಸ್ಪರ್ಧಿಸುವ ಬಗ್ಗೆ ಪುನರುಚ್ಚಾರ ಮಾಡಿದರು.

Advertisement

ಇನ್ನೊಂದೆಡೆ ತನ್ನ ತವರೂರಿಗೆ ಬಿಜೆಪಿಯ ಅತ್ಯುನ್ನತ ನಾಯಕ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ನಡೆ ಕುತೂಹಲ ಕೆರಳಿಸಿದ್ದು, ಮೋದಿ ಕಾರ್ಯಕ್ರಮಕ್ಕೆ ಹೋಗ್ತಾರಾ ಈಶ್ವರಪ್ಪ ಅನ್ನೋ ಪ್ರಶ್ನೆಗೆ ಈಶ್ವರಪ್ಪ ಮಾತ್ರ ತಾನು ಹೋಗೋದಿಲ್ಲ ಎಂದು ಹೇಳಿದ್ದಾರೆ. ಆ ಮೂಲಕ ಬಿಜೆಪಿಯ ಘಟಾನುಘಟಿಗಳ ಮನವೊಲಿಕೆಗೂ ಕೆ ಎಸ್ ಈಶ್ವರಪ್ಪ ಬಗ್ಗಿಲ್ಲ. ರಾಷ್ಟ್ರೀಯ ನಾಯಕರು ಮನೆಗೆ ಬಂದು ನಿರ್ಧಾರ ಕೈಬಿಡುವಂತೆ ಕೇಳಿಕೊಂಡರೂ ಸಹ ಬಿಗಿಪಟ್ಟು ಬಿಡದ ಈಶ್ವರಪ್ಪ, ಇವತ್ತು ಇಡೀ ದಿನ ದೇವಾಲಯ ಹಾಗೂ ಮಠಗಳಿಗೆ ಭೇಟಿ ನೀಡಲಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement