ಮಹಿಳೆಯ ಅತಿಯಾದ ಕಾಮದಾಹಕ್ಕೆ ಅಂತ್ಯ ಹಾಡಿದ ಯುವಕ..!

ಬೆಂಗಳೂರು : ಆಕೆ 48 ವರ್ಷ ಪ್ರಾಯದ ಮಹಿಳೆಯಾಗಿದ್ದು, ತನ್ನಿಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿ ಗಂಡನ ಮನೆಗೆ ಕಳುಹಿಸಿ ಕೊಟ್ಟಿದ್ದಾಳೆ. ಬೆಂಗಳೂರಿನ ಕೊಡಿಗೆ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿದ್ದ ಆಕೆಯ ದೇಹ ನಗ್ನವಾಗಿ ಬೆಡ್‌ರೂಮಿನಲ್ಲಿ ಪತ್ತೆಯಾಗಿತ್ತು. ಎಪ್ರಿಲ್ 19 ರಂದು ನಡೆದಿದ್ದ ಈ ಘಟನೆಯನ್ನು ಭೇದಿಸಿದ ಪೊಲೀಸರಿಗೆ ಶಾಕ್ ಆಗುವಂತ ವಿಚಾರಗಳು ಗೊತ್ತಾಗಿದೆ.

ಕೊಡಿಗೆ ಹಳ್ಳಿಯ ಭದ್ರಪ್ಪ ಲೇಔಟ್‌ನಲ್ಲಿ ನಡೆದಿದ್ದ ಶೋಭಾ ಎಂಬ ಮಹಿಳೆಯ ಕೊ*ಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಕೊಲೆ ಆರೋಪಿಯಾಗಿರುವ ನವೀನ್ ಎಂಬ ಯುವಕನನ್ನು ಕೊಡಿಗೆ ಹಳ್ಳಿಯ ಪೊಲೀಸರು ಬಂದಿಸಿದ್ದಾರೆ. ವಿಚಾರಣೆ ವೇಳೆ ಬಾಯ್ಬಿಟ್ಟ ವಿಚಾರ ಕೇಳಿ ಪೊಲೀಸರೇ ಸುಸ್ತಾಗಿದ್ದಾರೆ. ಬಳಿಕ ಹೆಚ್ಚಿನ ತನಿಖೆ ನಡೆಸಿದ ಪೊಲೀಸರಿಗೆ ಶೋಭಾಳ ಕಾಮದಾಹ ಬೆಳಕಿಗೆ ಬಂದಿದೆ.

ಶೋಭಾಳಿಗೆ ಇನ್‌ಸ್ಟಾಗ್ರಾಂ ಮೂಲಕ ಪರಿಚಿತನಾಗಿದ್ದ ನವೀನ್ ಬಳಿಕ ಸ್ನೇಹಿತನಾಗಿ, ಅದು ಪ್ರೀತಿಗೆ ತಿರುಗಿ ಬಳಿಕ ಇಬ್ಬರ ನಡುವೆ ಅನೈತಿಕ ಸಂಬಂಧದವರೆಗೂ ಬಂದು ನಿಂತಿತ್ತು. ಮಗನ ವಯಸ್ಸಿನ ಹುಡುಗನ ಜೊತೆಯಲ್ಲಿ ನಿರಂತರ ಸೆಕ್ಸ್ ಮಾಡುತ್ತಿದ್ದ ಶೋಭಾಳ ಅತಿಯಾದ ಕಾಮಧಾಹದಿಂದ ಬೇಸತ್ತು ಆಕೆಯನ್ನು ಕೊಲೆ ಮಾಡಿದ್ದಾಗಿ ಹೇರೋಹಳ್ಳಿ ಮೂಲದ ಆರೋಪಿ ನವೀನ್ ಹೇಳಿಕೆ ನೀಡಿದ್ದಾನೆ.

Advertisement

ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್‌ಗೆ ಸೆಕ್ಸ್‌ಗೆ ಒತ್ತಾಯಿಸಿದ್ದು ನಿರಾಕರಿಸಿದಾಗ ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ. ಈಕೆ ಅತಿಯಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಬೇಸರಗೊಂಡ ನವೀನ್‌ ಬೆಡ್‌ ರೂಮಿನಲ್ಲೇ ಆಕೆಯ ಕಥೆ ಮುಗಿಸಿದ್ದ.

48ರ ಮಹಿಳೆಗೆ ಯುವಕರ ಮೇಲೆ ಹುಚ್ಚು

48ರ ಶೋಭಾ ಕೇವಲ ನವೀನ್ ಮಾತ್ರವಲ್ಲದೇ ಅನೇಕ ಯುವಕರ ಸಹವಾಸ ಬೆಳೆಸಿದ್ದಳು. ಒಬ್ಬೊಬ್ಬ ಹುಡುಗರಿಗೂ ಒಂದೊಂದು ಹಣ್ಣಿನ ಹೆಸರಿಟ್ಟಿದ್ದು, ನವೀನ್‌ಗೆ ಆ್ಯಪಲ್ ಎಂದು ಹೆಸರಿಟ್ಟಿದ್ದಳಂತೆ. ಆ್ಯಪಲ್, ಆರೆಂಜ್, ಬನಾನ ಹೆಸರಿನಲ್ಲಿ ಹುಡುಗರ ಹೆಸರು ಸೇವ್ ಮಾಡಿಕೊಳ್ಳುತ್ತಿದ್ದಳು. ಆ್ಯಪ್‌ಗಳಲ್ಲಿಯೂ ಆ್ಯಕ್ಟಿವ್ ಆಗಿದ್ದ ಶೋಭಾ ಸುಮಾರು 20 ಕ್ಕೂ ಹೆಚ್ಚು ಹುಡುಗರನ್ನು ಖೆಡ್ಡಾಗೆ ಬೀಳಿಸಿಕೊಂಡಿದ್ದಳು. ಈಕೆ ಕರೆದಾಗ ಯುವಕರು ಏನಾದರೂ ಬಾರದೆ ಇದ್ದರೆ ಅವರ ಮನೆ ಬಳಿಯೇ ಹೋಗುತ್ತಿದ್ದಳು. ನಂತರ ಕಾರಿನ ಹಾರ್ನ್ ಜೋರಾಗಿ ಹಾಕುತ್ತಿದ್ದಳು. ಇಷ್ಟಕ್ಕೂ ಜಗ್ಗದೆ ಹೋದರೆ ಮನೆಯವರಿಗೆ ಖಾಸಗಿ ಫೋಟೊವನ್ನು ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು. ಅಷ್ಟೇ ಅಲ್ಲದೆ ಆ ಯುವಕರ ಮದುವೆಗೂ ಅಡ್ಡಿ ಪಡಿಸಿ ಮದುವೆ ನಿಲ್ಲಿಸಿದ್ದಳು.

ಕೊಲೆಯಾದ ದಿನವೂ ನವೀನ್‌ಗೆ ಬ್ಲಾಕ್ ಮೇಲ್ ಮಾಡಿ ಕರೆಸಿಕೊಂಡಿದ್ದಳು. ನವೀನ್‌ ಎಡಗೈಗೆ ಗಾಯವಾಗಿತ್ತು, ಗಾಯದ ಮೇಲೆ ಕೂತು ನೀನು‌ ಮದುವೆ ಆಗಬಾರದು, ಹೀಗೆ ನನ್ನ ಜತೆ ಇರಬೇಕು. ಮದುವೆ ಆದರೆ ಅಲ್ಲೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಬೇಸತ್ತ ನವೀನ್‌, ಶೋಭಾಳ ಕತ್ತು ಹಿಸುಕಿ ಕೊ*ಲೆ‌ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement