ಚಾರ್​ಧಾಮ್​ ಯಾತ್ರೆ : 42 ಯಾತ್ರಾರ್ಥಿಗಳ ಸಾವು..!

ಮೇ 10ರಿಂದ ಗಂಗೋತ್ರಿ – ಯಮುನೋತ್ರಿ ಮತ್ತು ಕೇದಾರನಾಥ ಧಾಮ, ಭಕ್ತರಿಗೆ ಬಾಗಿಲು ತೆರೆದರೆ, ಮೇ 12ರಿಂದ ಬದರಿನಾಥದಲ್ಲಿ ಯಾತ್ರಾರ್ಥಿಗಳ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕೋವಿಡ್‌ ಬಳಿಕ ಇದೀಗ ಚಾರ್ಧಾಮ್​ ಯಾತ್ರಾರ್ಥಿಗಳ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಈ ವರ್ಷದ ಕೂಡ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಚಾರ್ಧಾಮ್​ ಯಾತ್ರೆ ನಡೆಸಿದ್ದಾರೆ. ಕಳೆದ 13 ದಿನಗಳ ಹಿಂದೆ ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಮತ್ತು ಬದರಿನಾಥದ ಪವಿತ್ರ ಸ್ಥಳಗಳಿಗೆ ದರ್ಶನಕ್ಕೆ ಮುಕ್ತ ಅವಕಾಶ ನೀಡಲಾಗಿದ್ದು, ಈ ವೇಳೆ 42 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಒಂದೇ ಕಡೆ ತುಂಬಾ ಜನ ಸೇರುತ್ತಿರುವುದರಿಂದ ಉಸಿರಾಟದ ಸಮಸ್ಯೆಯಿಂದ ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕೇದಾರನಾಥ ಒಂದರಲ್ಲೇ 19 ಮಂದಿ ಸಾವನ್ನಪ್ಪಿದ್ರೆ, ಯಮುನೋತ್ರಿಯಲ್ಲಿ 12, ಬದರಿನಾಥದಲ್ಲಿ 9 ಮತ್ತು ಗಂಗೋತ್ರಿಯಲ್ಲಿ 2 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement