ನಾಳೆ ಆಂಧ್ರಪ್ರದೇಶದ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕಾರ

ಅಮರಾವತಿ: ತೆಲುಗು ದೇ ಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇ ಶದ ಮುಖ್ಯಮಂತ್ರಿಯಾಗಿ ನಾಲ್ಕನೇ ಅವಧಿಗೆ ನಾಳೆ(ಬುಧವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೆಸರಪಲ್ಲಿ ಐಟಿ ಪಾರ್ಕ್‌ ನಲ್ಲಿ ಬೆಳಿಗ್ಗೆ 11.27ಕ್ಕೆ ನಾಯ್ಡು ಪ್ರಮಾಣವಚನ
ಸ್ವೀ ಕರಿಸಲಿದ್ದಾರೆ.ಟಿಡಿಪಿ ಶಾಸಕಾಂಗ ಪಕ್ಷದ ನಾಯಕರಾಗಿ ಎನ್. ಚಂದ್ರಬಾಬು ನಾಯ್ಡು ಅವರನ್ನು ಆಯ್ಕೆ ಮಾಡಲಾಗಿದೆ. ಜತೆಗೆ, ಇಂ ದು ನಡೆದ ಎನ್‌ಡಿಎ ಮೈತ್ರಿಪಕ್ಷಗಳ ಶಾಸಕರ ಸಭೆಯಲ್ಲೂ ನಾಯ್ಡು ಅವರನ್ನು ತಮ್ಮ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ಟಿಡಿಪಿ, ಬಿಜೆಪಿ ಮತ್ತು ಜನಸೇನಾ ನಾಯಕರನ್ನು ಒಳಗೊಂಡ ಎನ್‌ಡಿಎ ಬಣದ ನಾಯಕರು ರಾಜ್ಯಪಾಲ ಎಸ್.ಅಬ್ದುಲ್ ನಜೀ ರ್ ಅವರನ್ನು ಭೇಟಿಯಾಗಿ ಸರ್ಕಾ ರ
ರಚನೆಗೆ ಹಕ್ಕು ಮಂಡಿಸಿದ್ದಾರೆ.

Advertisement

ಪ್ರಧಾನಿ ನರೇಂದ್ರ ಮೋ ದಿ ಸೇ ರಿದಂತೆ ಎನ್‌ಡಿಎ ಮೈತ್ರಿಕೂಟದ ನಾಯಕರು ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement