ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕಿ ಲೋಕಯುಕ್ತ ಬಲೆಗೆ.!

 

ಬೆಂಗಳೂರು:  ಬೆಂಗಳೂರು ನಗರ ಜಿಲ್ಲೆಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕಿ ಪ್ರೀತಿ ಚಂದ್ರಶೇಖರ್ ಮತ್ತು ಮಧ್ಯವರ್ತಿ ರಮೇಶ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ನ್ಯಾಯಬೆಲೆ ಅಂಗಡಿಯೊಂದರ ಪರವಾನಗಿ ರದ್ದುಗೊಳಿಸಲಾಗಿತ್ತು. ಈ ರದ್ದತಿ ಆದೇಶ ಹಿಂಪಡೆಯಲು ಅಂಗಡಿಯ ಮಾಲೀಕರಿಗೆ ₹ 70 ಸಾವಿರ ಲಂಕ್ಕೆ ಬೇಡಿಕೆಯಿಟ್ಟಿದ್ದ ಪ್ರೀತಿ ಚಂದ್ರಶೇಖರ್, ಮುಂಗಡವಾಗಿ ₹50 ಸಾವಿರ ಪಡೆದುಕೊಂಡಿದ್ದರು. ಈ ಕುರಿತು ಅಂಗಡಿಯ ಮಾಲೀಕರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

Advertisement

ಈ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಕೈಗೊಂಡ ಅಧಿಕಾರಿಗಳು, ಬಾಕಿ ₹ 20 ಸಾವಿರ ಪಡೆಯುತ್ತಿದ್ದ ಮಧ್ಯವರ್ತಿ ರಮೇಶ್ ಎಂಬಾತನನ್ನು ವಶಕ್ಕೆ ಪಡೆದರು. ಬಳಿಕ ಆತ ನೀಡಿದ ಮಾಹಿತಿ ಆಧರಿಸಿ ಪ್ರೀತಿ ಚಂದ್ರಶೇಖರ್ ಅವರನ್ನು ಬಂಧಿಸಿದ್ದಾರೆ.

 

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement