ರೇಣುಕಾಸ್ವಾಮಿ ಹತ್ಯೆ : ದಚ್ಚು ಬಗ್ಗೆ ರಚ್ಚು ಹೇಳಿದ್ದೇನು?

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. ಸದ್ಯ ದರ್ಶನ ಬಗ್ಗೆ ಡಿಂಪಲ್​ ಕ್ವೀನ್​ ರಚಿತಾ ರಾಮ್​ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮದಲ್ಲಿ ಕಾನೂನಾತ್ಮಕವಾಗಿ ನ್ಯಾಯ ಸಿಗಲಿ ಎಂದು ಬರೆದುಕೊಂಡಿದ್ದಾರೆ. ರಚ್ಚು ಬರೆದದ್ದು ಏನು? ನಟಿಯಾಗಿ ಅಲ್ಲ, ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ ಎಂದು ಪೋಸ್ಟ್​ ಹಂಚಿಕೊಂಡ ರಚಿತಾ ರಾಮ್​. ‘ಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು. ಮೊದಲನೆಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ’ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ನಟ ದರ್ಶನ್​ ಬಗ್ಗೆ ‘ನನ್ನನ್ನ ಚಿತ್ರರಂಗಕ್ಕೆ ಪರಿಚಯಿಸಿದ ದರ್ಶನ್ ಸರ್ ನನಗೆ ಗುರು ಸಮಾನರು. ನನ್ನ ಜೀವನದಲ್ಲಿ ತಪ್ಪುಗಳನ್ನ ತಿದ್ದಿ ಮಾರ್ಗದರ್ಶನ ನೀಡಿದವರು ದರ್ಶನ್ ಸರ್. ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಅನ್ನೋದು ನಂಬಲು ಕಷ್ಟ. ಪೊಲೀಸರ ತನಿಖೆಯಲ್ಲಿ ಸತ್ಯ ಹೊರಬರಲಿದೆ’ ಎಂದು ನಟಿ ಬರೆದುಕೊಂಡಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement