ಇಂದು ರಾಜ್ಯದ ಹಲವೆಡೆ ಭಾರಿ ಮಳೆ: 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು : ಇಂದು ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದ ಕನ್ನಡ, ಹಾಸನ, ಕೊಡಗು, ಮಂಡ್ಯದಲ್ಲಿ ಯೆಲ್ಲೋ ಅಲರ್ಟ್ ಘೊಷಣೆ ಮಾಡಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ಆಕಾಶವಿದ್ದು, ಗುಡುಗು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಕರಾವಳಿ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಇಂದು ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ಮಂಡ್ಯ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement