ವಚನ- ರಾಯಸದ ಮಂಚಣ್ಣ

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ

ವಚನ: :

Advertisement

ಮರಾಳಂಗೆ ಹಾಲು ನೀರನೆರೆದಲ್ಲಿ

ನೀರನುಳುಹಿ ಹಾಲ ಕೊಂಬ ಭೇದವ ನೋಡಾ !

ಎಣ್ಣೆ ನೀರ ಕೂಡಿದಲ್ಲಿ ಅದು ತನ್ನಿಂದಲೆ ಬೆಳೆದು,

ಚೆನ್ನಾಗಿ ಉರಿಯದ ಭೇದವ ನೋಡಾ!

ಮಣ್ಣು ಹೊನ್ನಿನಲ್ಲಿ ಬೆಳೆದು, ತನ್ನ ತಪ್ಪಿಸಿಕೊಂಡು,

ಹೊನ್ನು ಬೆಲೆಯಾದ ಭೇದವ ನೋಡಾ !

ತನ್ನೊಳಗೆ ತಾನಿದು ತನ್ನನರಿಯದೆ,

ತೊಳಲುವ ಬಿನ್ನಾಣವ ನೋಡಾ !

ಚೆನ್ನಾಗಿ ನುಡಿವ ಅಣ್ಣಗಳ ಬಾಗಿಲಲ್ಲಿ ನಿಂದು,

ನಿಜವುಳ್ಳ ಅಣ್ಣಗಳ ಬಾಗಿಲಲ್ಲಿ ನಿಂದು, ಬಣ್ಣ ಗೆಟ್ಟವರ ಕಂಡು ಚುನ್ನವಾಡುತಿರ್ದ, ಜಾಂಬೇಶ್ವರಾ.

 

-ರಾಯಸದ ಮಂಚಣ್ಣ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement