ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ – ಇಂದು ಉದಯನಿಧಿ ಸ್ಟಾಲಿನ್‌ ಕೋರ್ಟ್ ಗೆ ಹಾಜರಾಗುವ ಸಾಧ್ಯತೆ

ಬೆಂಗಳೂರು: ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಅಂತ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ ಅವರಿಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ .

ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ 5 ತಿಂಗಳ ಹಿಂದೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ನೀಡಿತ್ತು. ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಕಳೆದ ಮಾರ್ಚ್ 4 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿತ್ತು. ಆದ್ರೆ ಕಾರಣಾಂತರದಿಂದ ಗೈರಾಗಿದ್ದ ಉದಯನಿಧಿ ಸ್ಟಾಲಿನ್‌ ಅವರಿಂದು ಬೆಳಗ್ಗೆ 10:30ರ ವೇಳೆಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಎದುರು ಹಾಜರಾಗಲಿದ್ದಾರೆ ಮೂಲಗಳಿಂದ ತಿಳಿದು ಬಂದಿದೆ.

ಬೆಂಗಳೂರಿನ ಪರಮೇಶ್ ಎಂಬುವವರು ಉದಯನಿಧಿ ಹೇಳಿಕೆ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ್ದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಜೆ. ಪ್ರೀತ್ ಅವರಿದ್ದ ಪೀಠ 5 ತಿಂಗಳ ಹಿಂದೆ ಸಮನ್ಸ್‌ ಜಾರಿಗೊಳಿಸಿತ್ತು.

Advertisement

2023ರ ಸೆಪ್ಟೆಂಬರ್‌ 3 ರಂದು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ಉದಯನಿಧಿ ಸ್ಟಾಲಿನ್‌ ವಿವಾದಾತ್ಮಕ ಹೇಳಿಕೆ ನೀಡಿದ್ದರು.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement