ಅಬಕಾರಿ ನೀತಿ ಹಗರಣ: ಸಿಬಿಐ ಬಂಧನ ಪ್ರಶ್ನಿಸಿ ಹೈಕೋ ರ್ಟ್ ಮೆಟ್ಟೀಲೆರಿದ ಕೇಜ್ರಿವಾಲ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐನಿಂದ ತಮ್ಮ ಬಂಧನ ಮತ್ತು ರಿಮ್ಯಾಂಡ್ ಆದೇಶವನ್ನು ಪ್ರಶ್ನಿಸಿ ಇಂದು ದೆಹಲಿ ಹೈಕೋ ರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ.

ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಜುಲೈ 12ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಲು ನ್ಯಾಯಾಲಯ ಶನಿವಾರ (ಜೂನ್ 29) ಆದೇಶಿಸಿತ್ತು. ಮೂರು ದಿನಗಳ ಕಸ್ಟಡಿ ವಿಚಾರಣಾ ಅವಧಿ ಮುಗಿದ ಬಳಿಕ ಕೇಜ್ರಿವಾಲ್ ಅವರನ್ನು ವಿಶೇಷ ನ್ಯಾಯಾಧೀಶ ಸುನೇನಾ ಶರ್ಮಾ ಅವರ ಮುಂದೆ ಹಾಜರುಪಡಿಸಲಾಗಿತ್ತು.

ತನಿಖಾ ದೃಷ್ಟಿಯಿಂದ ಕೇಜ್ರಿವಾಲ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಬೇಕು ಎಂದು ಸಿಬಿಐ ಅರ್ಜಿ ಯಲ್ಲಿ ಕೋರಿತ್ತು. ಸಿಬಿಐ ಅರ್ಜಿ ಯನ್ನು ಅಂಗೀಕರಿಸಿದ ನ್ಯಾಯಾಧೀಶರು ಅವರಿಗೆ ಜುಲೈ 12ರವರೆಗೆ ನ್ಯಾಯಾಂ ಗ ಬಂಧನಕ್ಕೆ ಆದೇಶಿಸಿದರು. ಅರವಿಂದ ಕೇಜ್ರಿವಾಲ್ ಅವರನ್ನು ಜೂನ್ 26ರಂ ದು ಸಿಬಿಐ ಬಂಧಿಸಿತ್ತು.

Advertisement

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement