ರಾಜಸ್ಥಾನದ ಕೃಷಿ ಸಚಿವ ಕಿರೋಡಿಲಾಲ್​ ಮೀನಾ ರಾಜೀನಾಮೆ

ರಾಜಸ್ಥಾನ:ರಾಜಸ್ಥಾನದ ರಾಜಕೀಯದಲ್ಲಿನ ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಕ್ಯಾಬಿನೆಟ್ ಸಚಿವ ಡಾ.ಕಿರೋಡಿಲಾಲ್ ಮೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಲೋಕಸಭೆ ಚುನಾವಣೆಯ ನಂತರ, ಪ್ರತಿಪಕ್ಷಗಳು ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದವು. ಇದೀಗ ಮೀನಾ ತಮ್ಮ ರಾಜೀನಾಮೆಯನ್ನು ಮುಖ್ಯಮಂತ್ರಿ ಭಜನ್ ಲಾಲ್ ಅವರಿಗೆ ಕಳುಹಿಸಿದ್ದಾರೆ. ಚುನಾವಣಾ ಫಲಿತಾಂಶ ಬಂದ ಒಂದು ತಿಂಗಳ ನಂತರ ಅವರು ರಾಜೀನಾಮೆ ನೀಡಿದ್ದಾರೆ.

ಪೂರ್ವ ರಾಜಸ್ಥಾನಕ್ಕೆ ಸೇರಿದ ಮೀನಾ ಸಮುದಾಯದ ಹಿರಿಯ ನಾಯಕರಲ್ಲಿ ಡಾ. ಕಿರೋಡಿಲಾಲ್ ಮೀನಾ ಕೂಡ ಪ್ರಮುಖರು. ಕಳೆದ ವರ್ಷ ಡಿಸೆಂಬರ್‌ನಲ್ಲಿ ರಾಜಸ್ಥಾನದಲ್ಲಿ ರಚನೆಯಾದ ಬಿಜೆಪಿಯ ಭಜನ್ ಲಾಲ್ ಸರ್ಕಾರದಲ್ಲಿ ಅವರನ್ನು ಕೃಷಿ ಸಚಿವರನ್ನಾಗಿ ಮಾಡಲಾಯಿತು.

Advertisement

ಆದರೆ, ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ, ತಮ್ಮ ಉಸ್ತುವಾರಿಯಲ್ಲಿರುವ ಏಳು ಸ್ಥಾನಗಳಲ್ಲಿ ಒಂದಾದರೂ ಬಿಜೆಪಿ ಸೋತರೆ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಭರವಸೆ ನೀಡಿದ್ದರು. ಈಗ ಪೂರ್ವ ರಾಜಸ್ಥಾನದಲ್ಲಿ ಪಕ್ಷದ ಸೋಲಿನ ನೈತಿಕ ಹೊಣೆ ಹೊತ್ತು ಅವರು ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement