ಮೆಟ್ರಿಕ್ ನಂತರದ  ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ

 

     ದಾವಣಗೆರೆ : ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ  ವಿದ್ಯಾರ್ಥಿ ನಿಲಯಗಳಿಗೆ (ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸ್ ನ ವಿದ್ಯಾರ್ಥಿಗಳಿಗೆ ಪ್ರವೇಶಕ್ಕಾಗಿ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ https://shp.karnataka.gov.in ನ  ಮೂಲಕ ಆಹ್ವಾನಿಸಲಾಗಿದೆ.

ಆಗಸ್ಟ್ 8 ರೊಳಗಾಗಿ ರಾಜ್ಯ ವಿದ್ಯಾರ್ಥಿನಿಲಯದ ತಂತ್ರಾಂಶದ ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

Advertisement

ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ವಿವರ: ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕುಂದುವಾಡ ರಸ್ತೆ, 1 & 2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ, ಶಿವಕುಮಾರ್ ಸ್ವಾಮಿ ಬಡಾವಣೆ, ದಾವಣಗೆರೆ 1 & 2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಗುತ್ತೂರು ಕಾಲೋನಿ,ಹರಿಹರ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕೆರೆಬಿಳಚಿ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ, ಜಗಳೂರು ಟೌನ್,

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂ.ಸಂ:08192-250022 ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿ ದೂ.ಸಂ : 08192-250066 ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement