ಕಾಸರಗೋಡು: ಮೆದುಳು ಜ್ವರಕ್ಕೆ ಯುವಕ ಬಲಿ

ಕಾಸರಗೋಡು : ಅಮಿಬಿಕ್ ಮೆದುಳು ಜ್ವರದಿಂದ ಕಾಸರಗೋಡಿನ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ನಡೆದಿದೆ.

 

ಚಟ್ಟಂಚಾಲ್ ಉಕ್ರಂಪಾಡಿಯ ಮಣಿಕಂಠ (36) ಮೃತಪಟ್ಟವರು. ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದ ಮಣಿಕಂಠ ಅನಾರೋಗ್ಯದ ಹಿನ್ನಲೆಯಲ್ಲಿ ಊರಿಗೆ ಬಂದಿದ್ದರು. ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜ್ವರ ಕಡಿಮೆಯಾಗದ ಹಿನ್ನಲೆ ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಅವರನ್ನು ತಪಾಸಣೆಗೊಳಪಡಿಸಿದಾಗ ಅಮಿಬಿಕ್ ಸೋಂಕು ಇರುವುದು ದೃಢಪಟ್ಟಿತ್ತು.

Advertisement

ಮಣಿಕಂಠ ಅವರಿಗೆ ಮುಂಬೈಯಲ್ಲಿ ಸೋಂಕು ತಗಲಿರಬಹುದು ಎಂದು ಶಂಕಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಯಾವುದೇ ಆತಂಕ ಪಡಬೇಕಿಲ್ಲ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಈ ಜ್ವರದ ಬಗ್ಗೆ ಮುನ್ನಚ್ಚರಿಕೆ ವಹಿಸಬೇಕುಎಂದು ಆರೋಗ್ಯ ಇಲಾಖೆ ತಿಳಿಸಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement