‌ಮುಡಾ ಹಗರಣ: ಸಿಎಂ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.

ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದರು.

ಪ್ರಕರಣ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ಬಗ್ಗೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಸುದೀರ್ಘ ವಾದ ಮಂಡನೆ ಆಲಿಸಿತ್ತು. ಸಿಎಂ ಸಿದ್ದರಾಮಯ್ಯ ಪರ ವಕೀಲರು, ಸಾಲಿಸಿಟರ್ ಜನರಲ್ ಹಾಗೂ ದೂರುದಾರರ ಪರ ವಕೀಲರು ಸುದೀರ್ಘ ವಾದ ಮಂಡನೆ ಮಾಡಿದ್ದರು.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement