ಸಚಿವ ಜಮೀರ್ ವಿರುದ್ಧ ಹೈಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ

ಬೆಂಗಳೂರು: ಹೈಕೋರ್ಟ್ ತೀರ್ಪನ್ನು ಪೊಲಿಟಿಕಲ್ ಜಡ್ಜ್‌ಮೆಂಟ್‌ ಎಂದಿದ್ದ ಸಚಿವ ಜಮೀರ್ ಅಹ್ಮದ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ಅವರು ಹೈಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ತೀರ್ಪಿನ್ನು ಪೊಲಿಟಿಕಲ್ ಜಡ್ಜ್ಮೆಂಟ್ ಎಂದು ಜಮೀರ್ ಅಹ್ಮದ್ ಖಾನ್ ಕರೆದಿದ್ದರು. ಹೀಗಾಗಿ ಜಮೀರ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲು ಮಾಡುವಂತೆ ಅಡ್ವೋಕೆಟ್ ಜನರಲ್ ಶಶಿಕಿರಣ್ ಶೆಟ್ಟಿಗೆ ಟಿ ಜೆ ಅಬ್ರಹಾಂ ದೂರು ನೀಡಿದ್ದಾರೆ.

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿತ್ತು. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿತ್ತು.

Advertisement

ಹೈಕೋರ್ಟ್ ನ ಈ ಆದೇಶಕ್ಕೆ ಸಂಬಂಧಪಟ್ಟಂತೆ ಜಮೀರ್ ಅವರು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದರು. ಈ ವೇಳೆ ನಿನ್ನೆ ಬಂದಿರುವುದು ಎಲ್ಲೋ ಒಂದು ಕಡೆ ಪೊಲಿಟಿಕಲ್ ಜಡ್ಜ್‌ಮೆಂಟ್‌. ಇದು ನನ್ನ ವೈಯಕ್ತಿಕ ಅಭಿಪ್ರಾಯ. ತನಿಖೆ ನಡೆದರೆ ಸತ್ಯಾಂಶ ಆಚೆ ಬರುತ್ತೆ ತಾನೆ? ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ ಎಂದು ಹೇಳಿಕೆ ನೀಡಿದ್ದರು.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement