ಜಗದೀಶ್ ವಕೀಲನೇ ಅಲ್ಲ, ಲಾಯರ್ ಲೈಸೆನ್ಸ್ ಕ್ಯಾನ್ಸಲ್..! ಅಸಲಿ ವಿಚಾರ ಬಯಲಿಗೆ

ಬೆಂಗಳೂರು : ಜಗದೀಶ್ ಕುಮಾರ್ ಅವರ 12ನೇ ತರಗತಿಯ ಮಾರ್ಕ್ಸ್ ಕಾರ್ಡ್​ ನಕಲಿ ಅನ್ನೋದು ದೃಢಪಟ್ಟಿದೆ. ಈ ಕಾರಣದಿಂದ ಅವರ ಡಿಗ್ರೀ ಹಾಗೂ ಎಲ್​ಎಲ್​ಬಿ ಪ್ರಮಾಣಪತ್ರವನ್ನು ಅಮಾನ್ಯಗೊಳಿಸಲಾಗಿದೆ. ಹಿಮಾಂಶು ಭಾಟಿ ಎಂಬುವವರು ನೀಡಿದ ದೂರನ್ನು ಆಧರಿಸಿ ತನಿಖೆ ನಡೆಸಿದಾಗ ಅಸಲಿ ವಿಚಾರ ಹೊರ ಬಿದ್ದಿತ್ತು.

ಕೆಎನ್ ಜಗದೀಶ್ ಕುಮಾರ್ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ತಾವು ಎಲ್ಲ ಕಡೆಗಳಲ್ಲಿ ವಕೀಲ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆದರೆ, ಅವರ ಪರವಾನಿಗೆಯನ್ನು ದೆಹಲಿ ಬಾರ್ ಕೌನ್ಸಿಲ್ ರದ್ದು ಮಾಡಿರೋ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಹೌದು, ಮೇ 7ರಂದು ಜಗದೀಶ್ ಅವರ ಪರವಾನಿಗೆಯನ್ನು ದೆಹಲಿ ಬಾರ್ ಕೌನ್ಸಿಲ್ ರದ್ದು ಮಾಡಿದೆ. ಇದಕ್ಕೆ ಅವರು ಮಾಡಿದ ವಂಚನೆಯೇ ಕಾರಣ.

 

Advertisement

ಜಗದೀಶ್ ಕುಮಾರ್ ಅವರ 12ನೇ ತರಗತಿಯ ಮಾರ್ಕ್ಸ್ ಕಾರ್ಡ್​ ನಕಲಿ ಅನ್ನೋದು ದೃಢಪಟ್ಟಿದೆ. ಈ ಕಾರಣದಿಂದ ಅವರ ಡಿಗ್ರೀ ಹಾಗೂ ಎಲ್​ಎಲ್​ಬಿ ಪ್ರಮಾಣಪತ್ರವನ್ನು ಅಮಾನ್ಯಗೊಳಿಸಲಾಗಿದೆ. ಹಿಮಾಂಶು ಭಾಟಿ ಎಂಬುವವರು ಜಗದೀಶ್ ವಿರುದ್ಧ ದೂರು ನೀಡಿದ್ದರು. ಅವರ ದೂರನ್ನು ಆಧರಿಸಿ ತನಿಖೆ ನಡೆಸಿದಾಗ ಅಸಲಿ ವಿಚಾರ ಹೊರ ಬಿದ್ದಿತ್ತು.

ದೆಹಲಿ ಬಾರ್ ಕೌನ್ಸಿಲ್ ಆದೇಶದ ಪ್ರಕಾರ ಜಗದೀಶ್ ಕುಮಾರ್ ಅವರು ಯಾವುದೇ ಕೋರ್ಟ್​​ನಲ್ಲಿ ವಾದ ಮಂಡಿಸುವಂತಿಲ್ಲ. ಅವರು ವಕೀಲರೇ ಅಲ್ಲ. ಈಗ ಹೆಸರಿಗಷ್ಟೇ ತಾವು ವಕೀಲರು ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ ಅಷ್ಟೇ. ಈ ವಿಚಾರ ಹೊರ ಬರುತ್ತಿದ್ದಂತೆ ಎಲ್ಲರೂ ಅವರಿಗೆ ಉಗಿದು ಉಪ್ಪಿನಕಾಯಿ ಹಾಕುತ್ತಿದ್ದಾರೆ.

 

ಈ ವಾರಾಂತ್ಯದ ಎಪಿಸೋಡ್​ಗೆ ಎಲ್ಲರೂ ಕಾದಿದ್ದಾರೆ. ಮೊದಲ ವಾರ ಸಾಮಾನ್ಯವಾಗಿ ಸುದೀಪ್ ಕೂಲ್ ಆಗಿಯೇ ಇರುತ್ತಾರೆ. ಎಲ್ಲರಿಗೂ ಮನೆ ಹೊಸದು ಎನ್ನುವ ಕಾರಣಕ್ಕೆ ಸುದೀಪ್ ಈ ರೀತಿ ಮಾಡುತ್ತಾರೆ. ಆದರೆ, ಈ ವಾರ ಎಲ್ಲರಿಗೂ ಸರಿಯಾಗಿ ಕ್ಲಾಸ್ ತೆಗೆದುಕೊಳ್ಳುವ ನಿರೀಕ್ಷೆ ಇದೆ. ಅದರಲ್ಲೂ ಜಗದೀಶ್ ವಿರುದ್ಧ ಸುದೀಪ್ ಕೆಂಡಾಮಂಡಲ ಆಗೋ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement