‘ನಾವು ಯಾವುದೇ ಆಪರೇಷನ್ ಮಾಡಿಲ್ಲ’ – ದಿನೇಶ್‌ ಗುಂಡೂರಾವ್‌

ಕೊಪ್ಪಳ : ನಾವು ಯಾವುದೇ ಆಪರೇಷನ್ ಮಾಡಿಲ್ಲ, ಯೋಗೇಶ್ವರ್‌ ಅವರೇ ಒಪ್ಪಿಕೊಂಡು ಬಂದಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಜಿಲ್ಲೆಯಲ್ಲಿ ಆರೋಗ್ಯ ಸಮಸ್ಯೆ ತಡೆಗಟ್ಟುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷದವರು, ಮರಳಿ ಪಕ್ಷ ಸೇರಿದ್ದಾರೆ. ಪಕ್ಷದ ಅಭ್ಯರ್ಥಿಯಾದರೆ ಸಂತೋಷ. ಅದು ಡಿಸಿಎಂಶಿವಕುಮಾರ್‌ ಜವಾಬ್ದಾರಿ ಕ್ಷೇತ್ರ ಎಂದಿದ್ದಾರೆ.

ನಾವು ಯಾವುದೇ ಆಪರೇಷನ್ ಮಾಡಿಲ್ಲ. ಅವರೇ ಒಪ್ಪಿಕೊಂಡು ಬಂದಿದ್ದಾರೆ. ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುತ್ತದೆ. ಬಿಜೆಪಿಯವರು ಮಾಡಬಾರದು ಮಾಡಿದ್ದಾರೆ. ಅವರು ನಮಗೆ ಪಾಠ ಮಾಡಬೇಕಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement

ಆರೋಗ್ಯ ಕೇಂದ್ರಗಳಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕ ಮಾಡಿಕೊಳ್ಳುತ್ತೇವೆ. ಆರೋಗ್ಯ ಇಲಾಖೆಯಿಂದ ಉಚಿತವಾಗಿ ಮನೆಮನೆಗೆ ಮಾತ್ರೆ, ಚಿಕಿತ್ಸೆ ನೀಡುವ ಯೋಜನೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement