ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ ಪದ್ಮನಾಭ ಮಡಿವಾಳ ಅವರ ಮಗ ಪಿಯುಸಿ ವಿದ್ಯಾರ್ಥಿ ದಿಗಂತ್ ಅವರ ನಿಗೂಡ ನಾಪತ್ತೆಯಾಗಿ 5 ದಿನಗಳು ಕಳೆದರೂ ಪೊಲೀಸ್ ಇಲಾಖೆ ಹಾಗೂ ಸರಕಾರದ ಯಾವುದೇ ರೀತಿಯ ಕಾರ್ಯಾಚರಣೆ ಯಶಸ್ವಿ ಕಾಣದೆ ಇರುವುದರಿಂದ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಫರಂಗಿಪೇಟೆ ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಭಟನೆಯಲ್ಲಿ ಸತೀಶ್ ಕುಂಪಲ, ಪ್ರಸಾದ್ ಕುಮಾರ್ ರೈ, ರವೀಂದ್ರ ಕಂಬಳಿ, ಭರತ್ ಕುಮ್ಡೆಲು, ಉಮೇಶ್ ಶೆಟ್ಟಿ ಬರ್ಕೆ, ತಾರಾನಾಥ ಕೊಟ್ಟಾರಿ, ಫಾರೂಕ್ ಫರಂಗಿಪೇಟೆ, ರಮ್ಲಾನ್, ನಂದನ್ ಮಲ್ಯ, ಮನೋಜ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.