ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ ಬದಲಾವಣೆಗಳನ್ನು ಮಾಡಲು ರಾಜ್ಯ ಸರ್ಕಾರ ತಯಾರಿ ನಡೆಸಿದೆ.
ಈ ಬದಲಾವಣೆಯ ಪ್ರಕಾರ, ರಾಜ್ಯ ಕಾರ್ಯದರ್ಶಿಯಿಂದ ತಾಲ್ಲೂಕು ಪಂಚಾಯಿತಿಗೆ ಹಣ ವರ್ಗಾವಣೆ ಮಾಡಲಾಗುತ್ತದೆ ಮತ್ತು ಬಳಿಕ ತಾಲ್ಲೂಕು ಪಂಚಾಯಿತಿಯಿಂದ ನೇರವಾಗಿ ಮಹಿಳೆಯರ ಖಾತೆಗೆ ಹಣ ಜಮೆಯಾಗುತ್ತದೆ.
ಈಗಾಗಲೇ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿ ವಿಳಂಬವಾಗಿರುವು ಮಹಿಳೆಯರಲ್ಲಿ ಆತಂಕ ಮೂಡಿಸಿದೆ.
ಅರ್ಥಪೂರಕವಾಗಿ ಹಣ ಹಂಚಿಕೆ ಮತ್ತು ಜವಾಬ್ದಾರಿಯ ಹಂಚಿಕೆಗಾಗಿ ತಾಲ್ಲೂಕು ಪಂಚಾಯಿತಿಗಳನ್ನು ಈ ಕಾರ್ಯಕ್ಕೆ ಬಳಸಲು ನಿರ್ಧರಿಸಲಾಗಿದೆ.


































