Karnataka Budget 2025: ಸಿದ್ದರಾಮಯ್ಯ ಬಜೆಟ್ ನಲ್ಲಿ ` ಕೃಷಿ ವಲಯ’ಕ್ಕೆ ಸಿಕ್ಕ ಕೊಡುಗೆಗಳೇನು?

WhatsApp
Telegram
Facebook
Twitter
LinkedIn

ಬೆಂಗಳೂರು:ಸಿಎಂ ಸಿದ್ಧರಾಮಯ್ಯ ತಮ್ಮ ದಾಖಲೆಯ 16 ನೇ ಬಜೆಟ್‌ ನಲ್ಲಿ ಸಣ್ಣ ನೀರಾವರಿ ಹಾಗೂ ನೀರಾವರಿ ಯೋಜನೆಗಳಿಗೆ ಭರ್ಜರಿ ಅನುದಾನ ಘೋಷಿಸಿದ್ದಾರೆ. 2025-26ನೇ ಸಾಲಿನ ಕರ್ನಾಟಕ ಬಜೆಟ್‌ನ ಪ್ರಮುಖ ಅಂಶಗಳು ಇಲ್ಲಿವೆ.

ಗ್ಯಾರಂಟಿ ಯೋಜನೆಗಳಿಗಾಗಿ ₹ 51,034 ಕೋಟಿ ರೂ. ಮೀಸಲು ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ಎಂಬ ಹೊಸ ಯೋಜನೆ ಈ ಯೋಜನೆಯ ಮೂಲಕ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ರಸ್ತೆ, ಸಣ್ಣ ನೀರಾವರಿ ಹಾಗೂ ಮೂಲಸೌಕರ್ಯ ಒದಗಿಸಲು ₹ 8,000 ಕೋಟಿ ಬೆಂಗಳೂರು ಮಹಾನಗರದ ಮೂಲಸೌಕರ್ಯ, ಸೇವಾಪೂರೈಕೆ ಹಾಗೂ ಸಂಚಾರ ಸುವ್ಯವಸ್ಥೆಗಳಿಗಾಗಿ ʻಬ್ರ್ಯಾಂಡ್‌ ಬೆಂಗಳೂರುʼ ಎಂಬ ಪರಿಕಲ್ಪನೆಯಡಿ ಮಹತ್ವಾಕಾಂಕ್ಷಿ ಯೋಜನೆಗಳ ಜಾರಿ ಅತಿಹೆಚ್ಚು ಉದ್ಯೋಗ ಸೃಜನೆಯಾಗುವ ಎಂ.ಎಸ್.ಎಂ.ಇ, ಪ್ರವಾಸೋದ್ಯಮ, ಐಟಿಬಿಟಿ ವಲಯಗಳಲ್ಲಿ ಹೊಸ ನೀತಿ ನಾಗರೀಕ ಸೇವಾ ಪೂರೈಕೆ ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸಿ, ಕೌನ್ಸೆಲಿಂಗ್‌ ಮುಖಾಂತರ ವರ್ಗಾವಣೆ ಪ್ರಾದೇಶಿಕ ಅಸಮಾನತೆಯ ನಿವಾರಣೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಬಲವರ್ಧನೆ, ಸಾರಿಗೆಯ ಸುಗಮ ವ್ಯವಸ್ಥೆ, ಕಾನೂನು ಮತ್ತು ಸುವ್ಯವಸ್ಥೆ ನಿಭಾವಣೆಗೆ ಹೊಸ ಕಾರ್ಯತಂತ್ರಗಳಿಗೆ ಹೆಚ್ಚು ಆದ್ಯತೆ ರೈತರ ಕಲ್ಯಾಣ ಉದ್ದೇಶಿತ ಯೋಜನೆಗಳಿಗೆ ವಿವಿಧ ಇಲಾಖೆಗಳಿಗೆ ಕಳೆದ ಒಟ್ಟು $51,339 ಕೋಟಿ ಅನುದಾನ 2030 ರ ವೇಳೆಗೆ ಉತ್ಪಾದನಾ ವಲಯದಲ್ಲಿ ಶೇ.12ರಷ್ಟು ವಾರ್ಷಿಕ ಬೆಳವಣಿಗೆಯನ್ನು ಸಾಧಿಸುವುದರೊಂದಿಗೆ 20 ಲಕ್ಷ ಉದ್ಯೋಗಗಳನ್ನು ಸೃಜಿಸುವ ಗುರಿ ರಾಜ್ಯಕ್ಕೆ ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸುವ ಉದ್ದೇಶದಿಂದ ಒಟ್ಟು ₹13,692 ಕೋಟಿ ಆರ್ಥಿಕ ನೆರವು ಮತ್ತು ಸಹಾಯ ಹೂಡಿಕೆಗಳನ್ನು ಉತ್ತೇಜನಕ್ಕೆ₹ 13,500 ಕೋಟಿ ಸಹಾಯಧನ ಮತ್ತು ಆರ್ಥಿಕ ನೆರವು 2024-25ನೇ ಸಾಲಿಗೆ ರಾಜಸ್ವ ಸ್ವೀಕೃತಿಗಳು ವಾರ್ಷಿಕ ಶೇ 10.3 ರಷ್ಟು ಬೆಳವಣಿಗೆಯನ್ನು ದಾಖಲಿಸುವ ನಿರೀಕ್ಷೆ. 2024-25ನೇ ಸಾಲಿಗೆ ತೆರಿಗೆಯೇತರ ರಾಜಸ್ವದಲ್ಲಿ ₹14,500 ಕೋಟಿ ಗಳು ಸಂಗ್ರಹವಾಗುವ ನಿರೀಕ್ತೆರಿಗೆಯೇತರ ರಾಜಸ್ವವು ವರ್ಷವಾರು ಶೇ10.5ರಷ್ಟು ಬೆಳವಣಿಗೆ ಸಾಧಿಸುವ ನಿರೀಕ್ಷೆ. ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ರಸ್ತೆ, ಸಣ್ಣ ನೀರಾವರಿ ಹಾಗೂ ಮೂಲಸೌಕರ್ಯ ಒದಗಿಸಲು ₹8,000 ಕೋಟಿ ವಾಣಿಜ್ಯ ತೆರಿಗೆ, ಅಬಕಾರಿ, ನೋಂದಣಿ ಮತ್ತು ಮುದ್ರಾಂಕ, ಸಾರಿಗೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ʻಬಿʼ ಮತ್ತು ʻಸಿʼ ವೃಂದಗಳಲ್ಲಿ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಪ್ರಕ್ರಿಯೆ

ಕೃಷಿಗೆ ಸಿಕ್ಕಿದ್ದೇನು?

ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು ₹428 ಕೋಟಿ ಅನುದಾನ 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ ₹440 ಕೋಟಿ ಸಹಾಯಧನ ರೈತರ ಆದಾಯ ಮತ್ತು ಪೌಷ್ಟಿಕ ಭದ್ರತೆಯನ್ನು ಸುಧಾರಿಸಲು ₹ 88 ಕೋಟಿ 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪನೆ 12,000 ಕೃಷಿ ಹೊಂಡಗಳ ಸ್ಥಾಪನೆ ಹವಾಮಾನ ವಲಯಗಳನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿ ರಚನೆ ರೈತರ ಜೀವನೋಪಾಯವನ್ನು ಸುಧಾರಿಸಲು ʻಸಮಗ್ರ ಮಳೆಯಾಶ್ರಿತ ಕೃಷಿ ನೀತಿʼಯನ್ನು ಅನುಷ್ಠಾನ ಸುಸ್ಥಿರ ಸಾವಯವ ಕೃಷಿಯನ್ನು ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕನ್ನು ರಾಜ್ಯದ ಪ್ರಥಮ ಸಾವಯವ ತಾಲ್ಲೂಕನ್ನಾಗಿ ಪರಿವರ್ತಿನೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಒಟ್ಟಾರೆ 3,000 ಹೆಕ್ಟೇರ್ ಪ್ರದೇಶದಲ್ಲಿ ಸಮಗ್ರ ಮಣ್ಣು ಮತ್ತು ನೀರಿನ ನಿರ್ವಹಣೆ, ಸಮರ್ಪಕ ತ್ಯಾಜ್ಯ ನಿರ್ವಹಣೆ, ನೀರಿನ ಬಳಕೆ ಮತ್ತು ಸಮತೋಲನ ಪೋಷಕಾಂಶ ನಿರ್ವಹಣೆಯನ್ನು ಸಕ್ಕರೆ ಕಾರ್ಖಾನೆಗಳ ಸಹಯೋಗದೊಂದಿಗೆ ಜಾರಿ ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ₹25 ಕೋಟಿ

₹ 20 ಕೋಟಿ ಮೊತ್ತದಲ್ಲಿ ʻಸಾವಯವ ಮತ್ತು ಸಿರಿಧಾನ್ಯಗಳ ಹಬ್‌ʼ ಅನ್ನು ಸ್ಥಾಪನೆ 11. ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆತೋಟಗಾರಿಕೆ ತೋಟಗಾರಿಕಾ ಅಭಿವೃದ್ಧಿ ಯೋಜನೆ-2 ಗೆ ₹95 ಕೋಟಿ ಅನುದಾನ 12. ತೋಟಗಾರಿಕಾ ಬೆಳೆಗಳ ಹನಿ ನೀರಾವರಿ ಕಾರ್ಯಕ್ರಮದಡಿ ಸುಮಾರು 52,000 ಫಲಾನುಭವಿಗಳಿಗೆ ₹426 ಕೋಟಿ. ಸಹಾಯ ಧನ ಅಡಿಕೆಯ ಎಲೆ ಚುಕ್ಕೆ ರೋಗದ ಬಾಧೆ ನಿಯಂತ್ರಣ ಕ್ರಮಗಳಿಗೆ ₹62 ಕೋಟಿ 13. ಮೈಸೂರಿನಲ್ಲಿ NABARD ಸಹಯೋಗದಲ್ಲಿ ರೇಷ್ಮೆಗೂಡಿನ ಮಾರುಕಟ್ಟೆ ಸ್ಥಾಪನೆ ರೇಷ್ಮೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ ₹55 ಕೋಟಿ ರೂ. ಅನುದಾನ ನೀರಾವರಿ ಕ್ಷೇತ್ರಕ್ಕೆ ಸಿಎಂ ಘೋಷಿಸಿದ ಯೋಜನೆಗಳ ವಿವರ ಹೀಗಿದೆ. • ಭದ್ರಾ ಮೇಲ್ದಂಡೆ ಯೋಜನೆಗೆ 2023-24ರ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ಘೋಷಿಸಿದ 5,300 ಕೋಟಿ ರೂ. ಅನುದಾನ ಇನ್ನೂ ಬಿಡುಗಡೆಯಾಗಿರುವುದಿಲ್ಲ. ಆದರೂ, ರಾಜ್ಯ ಸರ್ಕಾರವು ಅಗತ್ಯ ಅನುದಾನವನ್ನು ಒದಗಿಸಿ ಈ ಯೋಜನೆಯನ್ನು ಪೂರ್ಣಗೊಳಿಸಲು ಕ್ರಮವಹಿಸುತ್ತಿದೆ. ತರೀಕೆರೆ ಏತ ನೀರಾವರಿ ಯೋಜನೆಯಡಿ 79 ಕೆರೆಗಳನ್ನು ತುಂಬಿಸುವ ಮೂಲಕ 49,790 ಎಕರೆ ಸೂಕ್ಷ್ಮ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 2,611 ಕೋಟಿ ರೂ. ಅಂದಾಜು ಮೊತ್ತದ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ಹೊಸದುರ್ಗ, ಹೊಳಲ್ಕೆರೆ, ಜಗಳೂರು, ಮೊಳಕಾಲ್ಮೂರು, ಚಳ್ಳಕೆರೆ ಮತ್ತು ಪಾವಗಡ ತಾಲ್ಲೂಕುಗಳಲ್ಲಿನ 30 ಕೆರೆಗಳನ್ನು ತುಂಬಿಸಿ ಒಂದು ಲಕ್ಷದ ಎಪ್ಪತ್ತೇಳು ಸಾವಿರ ಎಕರೆ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸಾಮರ್ಥ್ಯವನ್ನು ಕಲ್ಪಿಸಲಾಗುವುದು. – ಕೃಷ್ಣ ಮೇಲ್ದಂಡೆ ಯೋಜನೆ ಹಂತ-3ರ ವ್ಯಾಪ್ತಿಯ ಆಲಮಟ್ಟಿ ಅಣೆಕಟ್ಟಿನ ಗೇಟನ್ನು 524.256 ಮೀಟರ್‌ವರೆಗೆ ಎತ್ತರಿಸುವುದರಿಂದ ಮುಳುಗಡೆಯಾಗುವ ಜಮೀನುಗಳನ್ನು ಒಪ್ಪಂದ ಐತೀರ್ಪಿನ (Consent Award) ಮುಖಾಂತರ ಒಂದೇ ಹಂತದಲ್ಲಿ ಭೂಸ್ವಾಧೀನಪಡಿಸಿಕೊಂಡು ರೈತರಿಗೆ ಪರಿಹಾರ ವಿತರಣೆಗೆ ಕ್ರಮವಹಿಸಲಾಗುವುದು. ಅಲ್ಲದೇ, 2.01 ಲಕ್ಷ ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಬಾಕಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಕ್ರಮವಹಿಸಲಾಗುವುದು. – ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ಪೂರ್ವ ಸಿದ್ಧತಾ ಕಾರ್ಯ ಅಂತಿಮಗೊಂಡಿದ್ದು, ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರಗಳ ತೀರುವಳಿ ದೊರೆತ ಕೂಡಲೇ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. – ಕಳಸಾ-ಬಂಡೂರಾ ನಾಲಾ ತಿರುವು ಯೋಜನೆಯಡಿ 3.9 ಟಿಎಂಸಿ ನೀರಿನ ಬಳಕೆಗಾಗಿ ಕೇಂದ್ರ ಸರ್ಕಾರದಿಂದ ತೀರುವಳಿಗಳನ್ನು ನಿರೀಕ್ಷಿಸಿ ಈಗಾಗಲೇ ಯೋಜನಾ ಕಾಮಗಾರಿಗಳನ್ನು ಕೆಲವು ಷರತ್ತುಗಳೊಂದಿಗೆ ಗುತ್ತಿಗೆ ವಹಿಸಲಾಗಿದೆ. ಕೇಂದ್ರ ಸರ್ಕಾರದ ಅನುಮೋದನೆ ದೊರೆತ ಕೂಡಲೇ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. – ಕೃಷ್ಣಾ ಕಣಿವೆ, ಕಾವೇರಿ ಕಣಿವೆ ಹಾಗೂ ಇತರ ನದಿಗಳ ಕಣಿವೆಯ ವಿವಿಧ ಯೋಜನೆಗಳಡಿ ಬಾಕಿ ಇರುವ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು. – ಕೃಷ್ಣಾ ಕಣಿವೆಯ ಅನುಷ್ಠಾನ ಹಂತದಲ್ಲಿರುವ ಆಧುನೀಕರಣ ಹಾಗೂ ಏತ ನೀರಾವರಿ ಯೋಜನೆಗಳನ್ನು PMKSY – AIBP ಯೋಜನೆಯಡಿ ಕೇಂದ್ರ ಸರ್ಕಾರದ ಸಹಾಯಧನ ಪಡೆಯಲು ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು. – ಜಲಸಂಪನ್ಮೂಲ ಇಲಾಖೆಯಲ್ಲಿ ಕಾಮಗಾರಿಗಳ ಅಂದಾಜು ತಯಾರಿಕೆಯಲ್ಲಿ ಏಕರೂಪದ ತಾಂತ್ರಿಕ ಮಾನದಂಡಗಳನ್ನು ಜಾರಿಗೊಳಿಸಲಾಗುವುದು. – ತುಂಗಭದ್ರಾ ಜಲಾಶಯದಲ್ಲಿ ತುಂಬಿರುವ ಹೂಳಿನಿಂದಾಗಿ ನೀರಿನ ಸಂಗ್ರಹಣೆಯಲ್ಲಿ ಆಗಿರುವ ಕೊರತೆಯನ್ನು ಸರಿದೂಗಿಸಲು ಕೊಪ್ಪಳ ಜಿಲ್ಲೆಯಲ್ಲಿ ನವಲಿ ಸಮತೋಲನಾ ಜಲಾಶಯ ನಿರ್ಮಾಣವೂ ಸೇರಿದಂತೆ ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು. – ರಾಜ್ಯದ ಪ್ರಮುಖ ಅಣೆಕಟ್ಟು ಗೇಟುಗಳ ಸದೃಢತೆಯನ್ನು ತಾಂತ್ರಿಕ ಪರಿಶೀಲನೆಗೊಳಪಡಿಸಿ ಅಗತ್ಯ ಕಂಡುಬಂದಲ್ಲಿ ಗೇಟುಗಳನ್ನು ದುರಸ್ತಿಗೊಳಿಸಲು ಮತ್ತು ಬದಲಿಸಲು ಆದ್ಯತೆಯ ಮೇಲೆ ಕ್ರಮವಹಿಸಲಾಗುವುದು. ಸಣ್ಣ ನೀರಾವರಿ – ಎತ್ತಿನಹೊಳೆಯ ಯೋಜನೆಯಿಂದ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ 45 ಕೆರೆಗಳನ್ನು ಹಾಗೂ ಕೊರಟಗೆರೆ ತಾಲ್ಲೂಕಿನ 62 ಕೆರೆಗಳನ್ನು ತುಂಬಿಸಿ ಅಂತರ್ಜಲ ಹೆಚ್ಚಿಸುವ ಯೋಜನೆಯನ್ನು 553 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸಲು ಕ್ರಮವಹಿಸಲಾಗುವುದು. – ಪ್ರಗತಿಯಲ್ಲಿರುವ ಈ ಕೆಳಗಿನ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. i) 1,080 ಕೋಟಿ ರೂ. ಮೊತ್ತದ ವೃಷಭಾವತಿ ವ್ಯಾಲಿ ಮೊದಲನೇ ಹಂತದ 70 ಕೆರೆ ತುಂಬಿಸುವ ಯೋಜನೆ; ii) 70 ಕೋಟಿ ರೂ. ಮೊತ್ತದ ಹೆಚ್‌.ಎನ್ ವ್ಯಾಲಿ 2ನೇ ಹಂತದ ಯೋಜನೆಯಡಿ 24 ಕೆರೆ ತುಂಬಿಸುವ ಯೋಜನೆ; iii) 93.50 ಕೋಟಿ ರೂ. ಮೊತ್ತದ ಬೆಂಗಳೂರು ಪೂರ್ವ ತಾಲ್ಲೂಕಿನ 18 ಕೆರೆ ತುಂಬಿಸುವ ಯೋಜನೆ ಹಾಗೂ ಇತರೆ ಯೋಜನೆಗಳು (ಯೋಜನೆಯ ವಿವರಗಳನ್ನು ಅನುಬಂಧ-3 ರಲ್ಲಿ ಲಗತ್ತಿಸಿದೆ) – ಪ್ರಸಕ್ತ ಸಾಲಿನಲ್ಲಿ ರಾಜ್ಯಾದ್ಯಂತ ಸಣ್ಣ ನೀರಾವರಿ ಯೋಜನೆಗಳಾದ ಕೆರೆಗಳ ಆಧುನೀಕರಣ, ಅಣೆಕಟ್ಟು ಮತ್ತು ಪಿಕಪ್‌, ಕಿಂಡಿ ಅಣೆಕಟ್ಟು, ಏತ ನೀರಾವರಿ, ನಿಷ್ಕ್ರಿಯ ಯೋಜನೆಗಳ ಪುನರುಜ್ಜೀವನ ಇತ್ಯಾದಿ ಯೋಜನೆಗಳಡಿ ಒಟ್ಟಾರೆ 2,000 ಕೋಟಿ ರೂ. ಮೊತ್ತದ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon