ವಿಜಯಪುರ : ಮುಸ್ಲಿಂ ಗುತ್ತಿಗೆದಾರರಿಗೆ ಶೇ.4ರಷ್ಟು ಮೀಸಲಾತಿ ನೀಡುವ ವಿಧೇಯದ ತಿದ್ದುಪಡಿಗೆ ಒಪ್ಪಿಗೆ ನೀಡದಂತೆ ರಾಜ್ಯಪಾಲರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದಿದ್ದಾರೆ.
ರಾಜ್ಯಪಾಲರಾದ ಥಾವರ್ಚಂದ ಗೆಹ್ಲೋಟ್ ಅವರಿಗೆ ವಿವಾದಾತ್ಮಕ ತಿದ್ದುಪಡಿಗೆ ಒಪ್ಪಿಗೆ ನೀಡದಂತೆ ಯತ್ನಾಳ್ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ(ತಿದ್ದುಪಡಿ) ವಿಧೇಯಕ 2025 ಅನ್ನು ಮಂಗಳವಾರ ವಿಧಾನಸಭೆಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಮಂಡಿಸಿದ್ದರು.
ಸದನದಲ್ಲಿ ಈ ವಿಧೇಯಕ ಮಂಡನೆಯಾಗುತ್ತಲೇ ಶಾಸಕ ಯತ್ನಾಳ್ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಸಂವಿಧಾನ ಬಾಹಿರವಾಗಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಒದಗಿಸುವ ಕೆಟಿಪಿಪಿ(ತಿದ್ದುಪಡಿ) ಮಸೂದೆ 2025ರ ವಿವಾದಾತ್ಮಕ ತಿದ್ದುಪಡಿಗಳಿಗೆ ಒಪ್ಪಿಗೆ ನೀಡದಂತೆ ಯತ್ನಾಳ್ ಮನವಿ ಮಾಡಿದ್ದಾರೆ.