ಮೈಸೂರು : ನಾವು ಧರ್ಮದ ಆಧಾರದ ಮೇಲೆ ಮೀಸಲಾತಿ ಕೊಟ್ಟಿಲ್ಲ. ಹಿಂದುಳಿದ ವರ್ಗ ಅನ್ನೋ ಕಾರಣಕ್ಕೆ ಕೊಟ್ಟಿದ್ದೇವೆ. ಅಲ್ಪ ಸಂಖ್ಯಾತರು, ಹಿಂದುಳಿದ ವರ್ಗಕ್ಕೆ ಮೀಸಲಾತಿ ಕೊಟ್ಟಾಗ ಮುಸ್ಲಿಂ ಧರ್ಮದವರಿಗೂ ಕೊಡಬೇಕಾಗುತ್ತೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ ನೀಡಿದ ವಿಚಾರವಾಗಿ ಮಾತನಾಡಿದ ಅವರು, ಮುಸ್ಲಿಂ ಮೀಸಲಾತಿ ಕರ್ನಾಟಕ ಮಾತ್ರವಲ್ಲದೇ ಬೇರೆ ರಾಜ್ಯದಲ್ಲೂ ಇದೆ. ಆದ್ರೆ ನಾವು ಕೇವಲ ಮುಸ್ಲಿಂರಿಗೆ ಮಾತ್ರ ಮೀಸಲಾತಿ ಕೊಟ್ಟಿಲ್ಲ. ಮುಸ್ಲಿಂ ಸಮುದಾಯದ 70 ಜಾತಿಗೆ ಮೀಸಲಾತಿ ಕೊಟ್ಟಿದ್ದೇವೆ ಎಂದು ಪ್ರಧಾನಿ ಮೋದಿಯವರು ಹೆಮ್ಮೆಯಿಂದ ಹೇಳಿದ್ದಾರೆ. ಮೋದಿಯವರು ಮಾಡಿದರೆ ಸರಿ ನಾವು ಮಾಡಿದ್ರೆ ತಪ್ಪಾಗುತ್ತಾ? ಪ್ರಶ್ನಿಸಿದ್ದಾರೆ.
1977 ರಲ್ಲೇ ಹಾವನೂರು ಆಯೋಗ ಮುಸ್ಲಿಮರನ್ನ ಹಿಂದುಳಿದ ವರ್ಗಕ್ಕೆ ಸೇರಿಸಿದೆ. ಹಿಂದುಳಿದ ವರ್ಗಕ್ಕೆ ಕೊಟ್ಟಾಗ ಮುಸ್ಲಿಮರಿಗೂ ಕೊಡಬೇಕಾಗುತ್ತೆ. ಮುಸ್ಲಿಂ ಸಮುದಾಯದ 70 ಜಾತಿಗೆ ಮೀಸಲಾತಿ ಕೊಟ್ಟಿದ್ದೇವೆ ಎಂದು ಪ್ರಧಾನಿ ಮೋದಿಯವರು ಹೆಮ್ಮೆಯಿಂದ ಹೇಳಿದ್ದಾರೆ. ಮೋದಿಯವರು ಮಾಡಿದರೆ ಸರಿ ನಾವು ಮಾಡಿದ್ರೆ ತಪ್ಪಾಗುತ್ತಾ? ಅಂತ ಬಿಜೆಪಿ ನಾಯಕರ ಹೇಳಿಕೆ ವಿರುದ್ಧ ಕಿಡಿಕಾರಿದ್ದಾರೆ.