ಲಕ್ನೋ : ಉತ್ತರ ಪ್ರದೇಶದಲ್ಲಿ ಎಲ್ಲಾ ಧರ್ಮದ ಜನರು ಸುರಕ್ಷಿತವಾಗಿದ್ದಾರೆ. ಹಿಂದೂಗಳು ಸುರಕ್ಷಿತವಾಗಿದ್ದರೆ ಮುಸ್ಲಿಮರೂ ಸುರಕ್ಷಿತವಾಗಿರುತ್ತಾರೆ ಎಂದು ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದರು.
ಪಾಡ್ಕಾಸ್ಟ್ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು ಹಿಂದೂಗಳು ಸೇಫಾಗಿದ್ದರೆ, ಮುಸ್ಲಿಮರೂ ಸೇಫಾಗಿರುತ್ತಾರೆ. ಉತ್ತರ ಪ್ರದೇಶದಲ್ಲಿ ಜನರಿಗೆ ಎಲ್ಲಾ ಧಾರ್ಮಿಕ ಪದ್ದತಿಗಳನ್ನು ಆಚರಿಸುವ ಸ್ವಾತಂತ್ರ್ಯವಿದೆ. 100 ಹಿಂದೂ ಕುಟುಂಬಗಳ ನಡುವೆ ಒಂದು ಮುಸ್ಲಿಂ ಕುಟುಂಬ ಭದ್ರವಾಗಿದೆ. ಆದ್ರೆ 100 ಮುಸ್ಲಿಂ ಕುಟುಂಬಗಳ ನಡುವೆ 50 ಹಿಂದೂ ಕುಟುಂಬಗಳಿದ್ದರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಹೇಳಿದರು.
ಹಿಂದೂ ಆಡಳಿತಗಾರರು ಇತರರ ಮೇಲೆ ಅಧಿಪತ್ಯ ಸ್ಥಾಪಿಸಿದ ಉದಾಹರಣೆ ವಿಶ್ವ ಇತಿಹಾಸದಲ್ಲಿ ಇಲ್ಲ. ಇದಕ್ಕೆ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರವೇ ಕಾರಣ. ಇದಕ್ಕೂ ಮುನ್ನ ಪಾಕಿಸ್ತಾನದಲ್ಲೂ ಈ ಉದಾಹರಣೆ ಇತ್ತು. ಅಫ್ಘಾನಿಸ್ತಾನದಲ್ಲೂ ಏನಾಯ್ತು ಅನ್ನೋದು ನಮಗೆ ತಿಳಿದಿದೆ ಎಂದರು.
2017ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಒಂದೇ ಒಂದು ಕೊಮುಗಲಭೆ ನಡೆದಿಲ್ಲ ಎಂದ ಸಿಎಂ ಯೋಗಿ, ಉತ್ತರ ಪ್ರದೇಶದಲ್ಲಿ ಹಿಂದೂಗಳು ಸುರಕ್ಷಿತವಾಗಿದ್ದರೆ ಮುಸ್ಲಿಮರೂ ಸುರಕ್ಷಿತ. ನಾನು ಒಬ್ಬ ಸಾಮಾನ್ಯ ಪ್ರಜೆ, ಉತ್ತರ ಪ್ರದೇಶದ ಪ್ರಜೆ. ಎಲ್ಲರ ಸಂತೋಷಕ್ಕಾಗಿ ಹಾರೈಸುವ ‘ಯೋಗಿ’ ನಾನು. ಎಲ್ಲರ ಬೆಂಬಲದಿಂದ ಅಭಿವೃದ್ಧಿ ಸಾಧ್ಯ ಅಂತ ನಂಬುವವನು ನಾನು. ಸನಾತನ ಧರ್ಮವು ವಿಶ್ವದ ಅತ್ಯಂತ ಪುರಾತನ ಧರ್ಮವಾಗಿದೆ ಎಂದು ನುಡಿದರು.