ಋಷಿಕೇಶ ಏಮ್ಸ್ ನಿಂದ ಕೇದಾರನಾಥಕ್ಕೆ ಬಂದಿದ್ದ ಏರ್ ಅಂಬುಲೆನ್ಸ್ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಪತನಗೊಂಡಿದೆ.ಋಷಿಕೇಶ ಏಮ್ಸ್ನಿಂದ ತುರ್ತು ವೈದ್ಯಕೀಯ ಸೇವೆಯ ಅಡಿ ರೋಗಿಯನ್ನು ಕರೆದೊಯ್ಯಲು ಕೇದಾರನಾಥಕ್ಕೆ ಹೆಲಿಕಾಪ್ಟರ್ ಬಂದಿತ್ತು.
ಹೆಲಿಪ್ಯಾಡ್ನಲ್ಲಿ ಲ್ಯಾಂಡಿಂಗ್ಗೆ ಇಳಿಸಲಾಗುತ್ತಿತ್ತು, ಆದರೆ ಹೆಲಿಪ್ಯಾಡ್ಗೆ ಇನ್ನೂ 20 ಮೀ. ದೂರದಲ್ಲಿರುವಾಗಲೇ ಹಿಂಭಾಗ ಮುರಿದು ಹೆಲಿಕಾಪ್ಟರ್ ಪತನಗೊಂಡಿದೆ.ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಏರ್ ಆಂಬುಲೆನ್ಸ್ನಲ್ಲಿದ್ದ ಇಬ್ಬರು ವೈದ್ಯರು & ಪೈಲಟ್ ಸುರಕ್ಷಿತವಾಗಿದ್ದಾರೆ.