ಚಿತ್ರದುರ್ಗ : ಚಿತ್ರದುರ್ಗದ ವೀರಶೈವ ಸಮಾಜದವತಿಯಿಂದ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಂಡಿದೆ ಎಂದು ಸಮಾಜ ಕಾರ್ಯದರ್ಶಿಗಳಾದ ಪಿ.ವೀರೇಂದ್ರಕುಮಾರ್ ತಿಳಿಸಿದ್ದಾರೆ.
2024-25 ರ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶೇಕಡಾ ೯೦% ಮೇಲ್ಪಟ್ಟು ಅಂಕಗಳಿಸಿದ ಚಿತ್ರದುರ್ಗ ಜಿಲ್ಲೆಯ ವೀರಶೈವ/ ಲಿಂಗಾಯಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ವೀರಶೈವ ಸಮಾಜವು ತೀರ್ಮಾನಿಸಿದೆ.
ತಾವು ಅಭ್ಯಾಸ ಮಾಡಿದ ಪ್ರೌಢಶಾಲೆ/ಕಾಲೇಜು ಮುಖ್ಯೋಪಾಧ್ಯಾಯರು ಅಥವಾ ಪ್ರಾಂಶುಪಾಲರಿಂದ ದೃಢೀಕರಿಸಿದ ಅಂಕಪಟ್ಟಿ ಮತ್ತು ಜಾತಿ ದೃಢೀಕರಣ ಪತ್ರದೊಂದಿಗೆ ೩೦-೦೬-೨೦೨೫ ರೊಳಗಾಗಿ ಚಿತ್ರದುರ್ಗ ನಗರದ ಶ್ರೀ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿರುವ ವೀರಶೈವ ಸಮಾಜದ ಕಛೇರಿಗೆ ಅರ್ಜಿ ಸಲ್ಲಿಸಲು ವೀರಶೈವ ಸಮಾಜದ ಕಾರ್ಯದರ್ಶಿ ಪಿ.ವೀರೇಂದ್ರಕುಮಾರ್ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ೯೯೮೬೨೯೫೨೮೫, ೯೪೪೯೦೨೨೦೬೯ ಸಂಪರ್ಕ ಮಾಡಬಹುದಾಗಿದೆ.