ಧಾರವಾಡ; ಧಾರವಾಡ ಅಪರ ಜಿಲ್ಲಾಧಿಕಾರಿ DC ಗೀತಾ ಅವರ ಕಾರು ಅಪಘಾತವಾಗಿದೆ.
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಹೆಬಸೂರು ಬಳಿ ಅಪಘಾತ ಸಂಭವಿಸಿದೆ. DC ಕಾರಿಗೆ ಸಿಲಿಂಡರ್ ತುಂಬಿದ ಕ್ಯಾಂಟರ್ ಡಿಕ್ಕಿ ಹೊಡೆದಿದೆ.
ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಚಿವ ಸಂತೋಷ ಲಾಡ್ ಜೊತೆಗೆ, ಜಿಲ್ಲಾಧಿಕಾರಿಗಳು ಮಳೆ ಹಾನಿ ಪ್ರದೇಶ ಪರಿಶೀಲಿಸಿ ಮರಳಿ ಬರುವಾಗ ಅಪಘಾತ ಸಂಭವಿಸಿದೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.