ಚಿತ್ರದುರ್ಗ: ಪ್ರವಾಸೋದ್ಯಮ ಇಲಾಖೆ ವತಿಯಿಂದ ಪ್ರವಾಸೋದ್ಯಮ ಹಾಗೂ ಆತಿಥ್ಯ ಕ್ಷೇತ್ರದಲ್ಲಿ ಕೌಶಲಾಭಿವೃದ್ಧಿ ತರಬೇತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
12 ತರಗತಿ ಉತ್ತೀರ್ಣರಾದವರಿಗೆ ಸ್ವಾಗತಗಾರರು, 10ನೇ ತರಗತಿ ಉತ್ತೀರ್ಣರಾದವರಿಗೆ ಆಹಾರ ಮತ್ತು ಪಾನೀಯಗಳ ವಿತರಣೆ, 8ನೇ ತರಗತಿ ಉತ್ತೀರ್ಣರಾದವರಿಗೆ ವಿವಿಧ ಆಹಾರ ತಯಾರಿಕೆ ಹಾಗೂ 5ನೇ ತರಗತಿ ಉತ್ತೀರ್ಣರಾದವರಿಗೆ ಕೊಠಡಿ ನಿರ್ವಹಣೆ ತರಬೇತಿ ನೀಡಲಾಗುವದು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಐಹೆಚ್ಎ(ಇನ್ಸಿ÷್ಟಟ್ಯೂಟ್ ಆಫ್ ಹೋಟೆಲ್ ಮ್ಯಾನೇಜಮೆಂಟ್) ಮತ್ತು ಎಫ್.ಸಿ.ಐ (ಫುಡ್ ಕ್ರಾಫ್ಟ್ ಇನ್ಸಿ÷್ಟಟ್ಯೂಟ್) ಮೂಲಕ ಬೆಂಗಳೂರು ಹಾಗೂ ಮೈಸೂರಿನಲ್ಲಿ ತರಬೇತಿ ನೀಡಲಾಗುವುದು.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು 20 ರಿಂದ 45 ವರ್ಷದೊಳಗಿರಬೇಕು. ತರಬೇತಿ ವೇಳೆ ಊಟ, ವಸತಿ ಹಾಗೂ ಪ್ರೋತ್ಸಾಹಧನ ನೀಡಲಾಗುವುದು. ಮೊದಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಸೇವಾ ಸಿಂದೂ ಪೋರ್ಟಲ್ sevasindhu.karnataka.gov.in ಹಾಗೂ ಬಾಪೂಜಿ ಸೇವಾ ಕೇಂದ್ರ bsk.karnataka.gov.in ಟಿ ಮೂಲಕ ಪ್ರವಾಸೋದ್ಯಮ ವೆಬ್ಸೆಟ್ karnatakatourism.org ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿ ದೂರವಾಣಿ ಸಂಖ್ಯೆ 08194-234466, ಮೊಬೈಲ್ ಸಂಖ್ಯೆ 8660556443, ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರ ಮೊಬೈಲ್ ಸಂಖ್ಯೆ 9901948850 ಕರೆ ಮಾಡುವಂತೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.